Webdunia - Bharat's app for daily news and videos

Install App

ಬೆಂಗಳೂರು ಮಳೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪೋಸ್ಟ್ ವೈರಲ್

Krishnaveni K
ಶನಿವಾರ, 4 ಮೇ 2024 (10:00 IST)
ಬೆಂಗಳೂರು: ದಾಖಲೆಯ ತಾಪಮಾನ ಕಂಡಿದ್ದ ರಾಜ್ಯ ರಾಜಧಾನಿ ಬೆಂಗಳೂರಿಗೆ ಕಳೆದ ಎರಡು ದಿನಗಳಿಂದ ಮಳೆಯಾಗಿದ್ದು, ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಇದೀಗ ಮಳೆಯ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡಿರುವ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ಮೆಜೆಸ್ಟಿಕ್, ರಾಜಾಜಿನಗರ, ವಿಧಾನಸೌಧ, ಕೆಆರ್ ಪುರಂ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಮಳೆಯಿಂದಾಗಿ ಮಂಜು ಮುಸುಕಿದಂತಹ ವಾತಾವರಣವಿತ್ತು. ಈ ವಿಡಿಯೋಗಳನ್ನು ಡಿಕೆಶಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಇದರ ಜೊತೆಗೆ ಸಾಲೊಂದನ್ನು ಬರೆದಿದ್ದಾರೆ. 'ಏರ್‌ಕಂಡೀಶನ್‌ ಸಿಟಿಯ ವೈಭವ ಮತ್ತೆ ಮರುಕಳಿಸಿದೆ. ತಿಂಗಳಾನುಗಟ್ಟಲೆ ಬಿಸಿಲ ಧಗೆಯ ನಂತರ ವರುಣನು ಬೆಂಗಳೂರಿನ ಮೇಲೆ ಕೃಪೆ ತೋರಿದ್ದಾನೆ. ಬಿಸಿಲ ಝಳದಿಂದ ಕೊನೆಗೂ ಮುಕ್ತಿ ಸಿಗುತ್ತಿದೆ. ದ್ವೇಷ- ಕೋಮು ದಳ್ಳುರಿಯ ಧಗೆಯಿಂದ ಮುಕ್ತಿ ಸಿಗಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ' ಎಂದಿದ್ದಾರೆ. ಅವರ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೆ ಹಲವು ಇಂಟ್ರೆಸ್ಟಿಂಗ್ ಕಾಮೆಂಟ್ ಗಳು ಬಂದಿವೆ. ಇದು ಹಳೆಯ ವಿಡಿಯೋ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಹೊಸ ಸರ್ಕಾರ ಬರುತ್ತದೆ ಎಂದರೆ ಜೂನ್ ನಂತರ ನಿಮ್ಮ ಸರ್ಕಾರ ಪತನವಾಗುತ್ತದಾ ಸಾರ್ ಎಂದು ಕಾಲೆಳೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments