Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಬಿಜೆಪಿಗೆಲ್ಲಾ ಸೇರಲ್ಲ, ಇದೆಲ್ಲಾ ಹೈಕಮಾಂಡ್ ಗೆ ನಡುಕ ಹುಟ್ಟಿಸುವ ತಂತ್ರ

Krishnaveni K
ಶನಿವಾರ, 1 ಮಾರ್ಚ್ 2025 (11:04 IST)
ಬೆಂಗಳೂರು: ಡಿಕೆ ಶಿವಕುಮಾರ್ ಬಿಜೆಪಿ ಸೇರ್ಪಡೆ ವದಂತಿಗಳು ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆದರೆ ಇದೆಲ್ಲಾ ಹೈಕಮಾಂಡ್ ಗೆ ನಡುಕ ಹುಟ್ಟಿಸುವ ತಂತ್ರವಷ್ಟೇ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಇತ್ತೀಚೆಗೆ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಮತ್ತು ಕುಂಭಮೇಳ ಆಯೋಜನೆ ಬಗ್ಗೆ ಹೊಗಳಿ ಮಾತನಾಡಿದ್ದು ಅವರು ಬಿಜೆಪಿಯತ್ತ ವಾಲುತ್ತಿದ್ದಾರೆ ಎಂದು ಸುದ್ದಿಯಾಗಿದೆ. ಆದರೆ ಇದನ್ನು ಅವರು ತಳ್ಳಿ ಹಾಕಿದ್ದಾರೆ.

ಹಾಗಿದ್ದರೂ ಇದರ ಬೆನ್ನಲ್ಲೇ ರಾಜ್ಯದಲ್ಲಿ ಕ್ಷಿಪ್ರ ಕ್ರಾಂತಿಯಾಗುತ್ತದೆ ನೋಡುತ್ತಿರಿ ಎಂದು ಬಿಜೆಪಿ ನಾಯಕ ಬಾಂಬ್ ಸಿಡಿಸಿದ್ದಾರೆ. ಹೀಗಾಗಿ ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ ಹೊರಬಂದು ಬಿಜೆಪಿ ಜೊತೆ ಸರ್ಕಾರ ರಚಿಸಬಹುದು ಎಂದೆಲ್ಲಾ ಊಹಾಪೋಹಗಳು ಹಬ್ಬುತ್ತಿವೆ.

ಆದರೆ ಇದರ ನಡುವೆ ಬಿಜೆಪಿ ಬೆಂಬಲಿಗರು ಇಷ್ಟಕ್ಕೇ ಡಿಕೆಶಿ ಬಿಜೆಪಿ ಸೇರುತ್ತಾರೆ ಎಂಬ ಚರ್ಚೆ ಬೇಡ. ಇದೆಲ್ಲಾ ಕಾಂಗ್ರೆಸ್ ಹೈಕಮಾಂಡ್ ಗೆ ಎಚ್ಚರಿಕೆ ನೀಡಲು ಡಿಕೆಶಿ ಮಾಡುತ್ತಿರುವ ತಂತ್ರ ಎಂದಿದ್ದಾರೆ. ಹೀಗಾಗಿ ಡಿಕೆಶಿ ಈ ವದಂತಿಗಳನ್ನೇ ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments