Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಗೆ ಎಂಥಾ ದೈವ ಭಕ್ತಿ: ಕುಂಭಮೇಳದ ಬಳಿಕ ಈಗ ಕಾವೇರಿಯಲ್ಲೂ ಪುಣ್ಯಸ್ನಾನ

Krishnaveni K
ಶುಕ್ರವಾರ, 21 ಮಾರ್ಚ್ 2025 (14:15 IST)
ತಲಕಾವೇರಿ: ಇಂದು ಸಂಜೆ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮುನ್ನ ಇಂದು ಡಿಸಿಎಂ ಡಿಕೆ ಶಿವಕುಮಾರ್ ತಲಕಾವೇರಿಗೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದಾರೆ. ಕುಂಭಮೇಳದ ಬಳಿಕ ಈಗ ಕಾವೇರಿ ಪುಣ್ಯಸ್ನಾನ ಮಾಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಅನಾವರಣಗೊಳಿಸಿದ್ದಾರೆ ಡಿಕೆಶಿ.

ಡಿಕೆ ಶಿವಕುಮಾರ್ ಇತ್ತೀಚೆಗಿನ ದಿನಗಳಲ್ಲಿ ಟೆಂಪಲ್ ರನ್ ಮಾಡುವುದು ಜಾಸ್ತಿಯಾಗಿದೆ. ಈ ಬಗ್ಗೆ ವಿಪಕ್ಷಗಳ ವ್ಯಂಗ್ಯಕ್ಕೆ ಉತ್ತರಿಸಿದ್ದ ಡಿಕೆಶಿ ನನ್ನ ಧರ್ಮ ನನ್ನ ಇಷ್ಟ. ನನ್ನ ಧರ್ಮವನ್ನು ನಾನು ಪಾಲಿಸುತ್ತಿದ್ದೇನೆ ಎಂದಿದ್ದರು.

ಇದೀಗ ಇಂದು ಸ್ಯಾಂಕಿ ಕೆರೆಯಲ್ಲಿ ವಿಶ್ವ ಜಲದಿನದ ಅಂಗವಾಗಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಡಿಕೆಶಿ ತಲಕಾವೇರಿಗೆ ಭೇಟಿ ನೀಡಿ ಪುಣ್ಯಸ್ನಾನ, ಪೂಜೆ ಮಾಡಿದ್ದಾರೆ. ಕಾವೇರಿ, ಸುಜ್ಯೋತಿ, ಕನ್ನಿಕಾ ನದಿಗಳ ತ್ರಿವೇಣಿ ಸಂಗಮಕ್ಕೆ ಪೂಜೆ ಸಲ್ಲಿಸಿದ್ದಾರೆ. ಇಂದು ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಇಲ್ಲಿಂದ ನೀರು ಸಂಗ್ರಹಿಸಿ ಕೊಂಡೊಯ್ಯಲಾಗುತ್ತದೆ. ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮುಕ್ತವಾಗಿ ಪಾಲ್ಗೊಳ್ಳಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments