ಬೆಳಗಾವಿಗೆ ಡಿಕೆಶಿ ಎಂಟ್ರಿ: ಮುನಿದ ಸಚಿವ ರಮೇಶ್ ಜಾರಕಿಹೊಳಿಯಿಂದ ಮಾಸ್ಟರ್ ಪ್ಲ್ಯಾನ್?

Webdunia
ಶನಿವಾರ, 24 ನವೆಂಬರ್ 2018 (09:20 IST)
ಬೆಂಗಳೂರು: ಕಬ್ಬು ಬೆಳೆಗಾರರ ಜತೆ ಸಂಧಾನ ನಡೆಸಲು ಬೆಳಗಾವಿಗೆ ಬಂದು ಸಂಧಾನ ನಡೆಸಿದ ಸಚಿವ ಡಿಕೆ ಶಿವಕುಮಾರ್ ಮೇಲೆ ಮತ್ತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮುನಿಸಿಕೊಂಡಿದ್ದಾರೆ.

ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ಜಾರಕಿಹೊಳಿ ಸಹೋದರರು ಡಿಕೆಶಿ ಮೇಲಿನ ಮುನಿಸಿಗೆ ಸರ್ಕಾರದ ವಿರುದ್ಧವೇ ಬಂಡಾಯವೆದ್ದಿದ್ದನ್ನು ಇಲ್ಲಿ ಸ್ಮರಿಸಬಹುದು. ಅದಾದ ಬಳಿಕ ವಿವಾದ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು.

ಆದರೆ ಇದೀಗ ನಿನ್ನೆ ಸಚಿವ ಡಿಕೆ ಶಿವಕುಮಾರ್ ರೈತರ ಜತೆಗೆ ಸಂಧಾನ ಸಭೆ ನಡೆಸಿದ್ದು ಮತ್ತೆ ಜಾರಕಿಹೊಳಿ ಮುನಿಸಿಗೆ ಕಾರಣವಾಗಿದೆ ಎನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ತಮ್ಮ ಸಂಪರ್ಕದಲ್ಲಿರುವ ಶಾಸಕರ ಬೆಂಬಲದೊಂದಿಗೆ ಸಚಿವ ಜಾರಕಿಹೊಳಿ ಗುಪ್ತ ಸಭೆ ನಡೆಸಿ ಬೆಳಗಾವಿ ಅಧಿವೇಶನಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ಆದರೆ ಇನ್ನೊಂದೆಡೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಡಿಕೆಶಿ ನಡೆಸಿರುವ ಸಂಧಾನ ಸಭೆಯನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ. ಅಷ್ಟೇ ಅಲ್ಲ, ರಮೇಶ್ ಜಾರಕಿಹೊಳಿ ಮಾಡಬೇಕಾದ ಕೆಲಸವನ್ನು ಡಿಕೆಶಿ ಮಾಡಿದ್ದಾರೆ ಎಂದು ಕೊಂಡಾಡಿದ್ದಾರೆ. ಈ ವಿಚಾರಗಳ ಜತೆಗೆ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯೂ ಸದ್ಯದಲ್ಲೇ ನಡೆಯುವುದರಿಂದ ಮತ್ತೊಂದು ಬಂಡಾಯಕ್ಕೆ ಈ ವಿದ್ಯಮಾನ ಕಾರಣವಾಗುತ್ತಾ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments