Webdunia - Bharat's app for daily news and videos

Install App

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

Krishnaveni K
ಶುಕ್ರವಾರ, 22 ಆಗಸ್ಟ್ 2025 (12:58 IST)
ಬೆಂಗಳೂರು: ಧರ್ಮಸ್ಥಳ ಕೇಸ್ ನಲ್ಲಿ ಭಾರೀ ಸದ್ದು ಮಾಡ್ತಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ ಎಂದಿದ್ದಾರೆ.

ಬಿಜೆಪಿ ಧರ್ಮಸ್ಥಳ ಚಲೋ ಅಭಿಯಾನದ ಬಗ್ಗೆ ಇಂದು ಮಾಧ್ಯಮಗಳು ಡಿಸಿಎಂ ಡಿಕೆ ಶಿವಕುಮಾರ್ ಬಳಿ ಪ್ರತಿಕ್ರಿಯೆ ಕೇಳಿವೆ. ಈ ವೇಳೆ ಮಾತನಾಡಿದ ಡಿಕೆಶಿ, ನೋಡ್ರಪ್ಪಾ ಅದೊಂದು ಠುಸ್ ಗಿರಾಕಿ. ಬಿಜೆಪಿಯವರು ರಾಜಕೀಯ ಮಾಡ್ತಿದ್ದಾರೆ. ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಪೊಲೀಸರ ತಂಡ ಸರಿಯಾಗಿ ತನಿಖೆ ಮಾಡ್ತಿದ್ದೆ.

ಆದರೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಬಗ್ಗೆ ಏನೋ ಮಾತನಾಡಿದ್ದಾನೆ. ಅದಕ್ಕೆ ಒದ್ದು ಒಳಗೆ ಹಾಕ್ಸಿದ್ದೀವಿ. ಅವನತ್ರ ಏನು ದಾಖಲೆ ಇದೆ ಹಾಗೆಲ್ಲಾ ಆರೋಪ ಮಾಡಕ್ಕೆ?

ರಾಜಕೀಯವಾಗಿ ಏನೇ ವಿರೋಧ ಇರಬಹುದು. ಆದರೆ ನಮ್ಮ ವಿರೋಧ ಪಕ್ಷದ ನಾಯಕರ ಬಗ್ಗೆ ಆಧಾರವಿಲ್ಲದೇ ಆರೋಪ ಮಾಡಿದ್ದಕ್ಕೆ ತಕ್ಕ ಕ್ರಮ ಕೈಗೊಂಡಿದ್ದೀವಿ. ಸಿಎಂ ಬಗ್ಗೆನೂ ಹೇಳಿಕೆ ನೀಡಿದ್ರು. ಅದೂ ಸರಿಯಲ್ಲ. ಏನೇ ವಿರೋಧಗಳಿರಲಿ, ಅದಕ್ಕೆ ದಾಖಲೆ ಇಟ್ಟುಕೊಂಡು ಮಾತನಾಡಬೇಕು. ಇಲ್ಲದೇ ಏನೇನೋ ಮಾತನಾಡೋದಲ್ಲ’ ಎಂದು ಡಿಕೆಶಿ ಖಡಕ್ ಆಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಪಿಎಂ ಕೇರ್ ಫಂಡ್ ಶಾಲೆಗಳಿಗೆ ಬಳಸಿ ಎಂದ ಅಭಿಜಿತ್ ದಿಪ್ಕೆ: ನಿಮ್ಮ ಹುಡುಗನಿಗೆ ಸ್ವಲ್ಪ ಬುದ್ಧಿ ಹೇಳಿ ಎಂದು ಕೇಜ್ರಿವಾಲ್ ಗೆ ಹೇಳಿದ ಬಿಜೆಪಿ

ಸುರಕ್ಷತೆಗಾಗಿ ಸೇನೆ ರಸ್ತೆ ಬಂದ್ ಮಾಡಿದ್ರೆ ನಾನು ಜೆನ್ ಜಿ, ಇದನ್ನೆಲ್ಲಾ ಸಹಿಸಲ್ಲ ಎಂದು ರದ್ದಾಂತ ಮಾಡಿದ ಯುವತಿ video

ರೈಲಿನಲ್ಲಿ ಪ್ರಯಾಣ ಮಾಡುವಾಗ ಮಕ್ಕಳ ಕೈಗೆ ಮೊಬೈಲ್ ಕೊಡುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಸರ್ಕಾರದ ಹಣ ಪಡೆಯಲು ಸಹಾಯ ಮಾಡಿದ್ದಕ್ಕೆ ಮಹಿಳೆಯ ಸಂತಸ ನೋಡಿ… ಸೈಬರ್ ಕೆಫೆಗೆ ಸ್ವೀಟ್ ಬಾಕ್ಸ್ ಗಿಫ್ಟ್ Video

ಮುಂದಿನ ಸುದ್ದಿ
Show comments