84 ಲಕ್ಷ ಟೆಸ್ಟ್ ಗೆ 500 ಕೋಟಿ ಬಿಲ್: ಬಿಜೆಪಿ ಕಾಲದ ಕೊವಿಡ್ ಹಗರಣ ಬಿಚ್ಚಿಟ್ಟ ಡಿಕೆ ಶಿವಕುಮಾರ್

Krishnaveni K
ಶನಿವಾರ, 7 ಡಿಸೆಂಬರ್ 2024 (15:51 IST)
ಬೆಂಗಳೂರು: ಮುಡಾ, ವಾಲ್ಮೀಕಿ ಹಗರಣದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಬಿಜೆಪಿಗೆ ಈಗ ಕಾಂಗ್ರೆಸ್ ತಿರುಗೇಟು ಕೊಡಲು ಕೊವಿಡ್ ಹಗರಣವನ್ನು ಬಳಸುತ್ತಿದೆ. ಕೊವಿಡ್ ಹಗರಣದಲ್ಲಿ ಬಿಜೆಪಿ ಭಾಗಿಯಾಗಿರುವುದರ ಬಗ್ಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಹಲವು ಆರೋಪ ಮಾಡಿದ್ದಾರೆ.

ಇಂದು ನಡೆದ ಸಂಪುಟ ಉಪ ಸಮಿತಿಯ ಎರಡನೇ ಸಭೆಯನ್ನು ನಡೆಸಿದ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಕಾಲದ ಕೊವಿಡ್ ಹಗರಣದ ಬಗ್ಗೆ ತನಿಖೆ ನಡೆಸುವ ನಿರ್ಧಾರ ಪ್ರಕಟಿಸಿದ್ದಾರೆ. ನ್ಯಾ. ಕುನ್ಹಾ ಆಯೋಗದ ವರದಿಯ ಪರಿಶೀಲನೆ ನಡೆಸಲಾಗಿದೆ.

ಈ ವರದಿಯಲ್ಲಿ ಕೊವಿಡ್ ಸಮಯದಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 84 ಲಕ್ಷ ಆರ್ ಟಿಪಿಸಿಆರ್ ಟೆಸ್ಟ್ ನಡೆಸಲು 500 ಕೋಟಿ ರೂ. ಬಿಲ್ ಮಾಡಿ 400 ಕೋಟಿ ರೂ. ಪಾವತಿಸಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕಿದ್ವಾಯಿ ಒಂದೇ ಆಸ್ಪತ್ರೆಯಲ್ಲಿ 24 ಲಕ್ಷ ಆರ್ ಟಿಪಿಸಿಆರ್ ಟೆಸ್ಟ್ ನಡೆಸಿರುವುದು ಅನುಮಾನಸ್ಪದವಾಗಿದೆ ಎಂದಿದ್ದಾರೆ.

 
ಕುನ್ಹಾ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಹೇಳಿದ್ದಾರೆ. ಯಾರು ತಪ್ಪಿತಸ್ಥರಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಿದ್ದಾಗಿ ಹೇಳಿದ್ದಾರೆ. ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments