ಕಾಂಗ್ರೆಸ್ ಭಿಕ್ಷೆಯಿಂದಲೇ ವಿಜಯೇಂದ್ರ ಶಾಸಕರಾಗಿದ್ದು: ಡಿಕೆ ಶಿವಕುಮಾರ್ ಬಹಿರಂಗ ಹೇಳಿಕೆ

Krishnaveni K
ಶುಕ್ರವಾರ, 21 ಫೆಬ್ರವರಿ 2025 (12:21 IST)
ಬೆಂಗಳೂರು: ಕಾಂಗ್ರೆಸ್ ಭಿಕ್ಷೆಯಿಂದಲೇ ವಿಜಯೇಂದ್ರ ಶಾಸಕನಾಗಿದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಕಾರ್ಯಕ್ರಮವೊಂದರಲ್ಲಿ ಡಿಕೆಶಿ ಈ ಹೇಳಿಕೆ ನೀಡಿದ್ದರು. ಇದರ ಬಗ್ಗೆ ಈಗ ಬಿಜೆಪಿ ಬೆಂಗಲಿಗರೇ ಚರ್ಚೆ ನಡೆಸುತ್ತಿದ್ದಾರೆ. ಒಂದೆಡೆ ರಾಜ್ಯ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಬಣ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದೆ. ಇದರ ನಡುವೆ ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

‘ವಿಜಯೇಂದ್ರ ಅಲ್ಲ ಈಗ ವಿಜಯೇಂದ್ರ ಅಣ್ಣ ಎಂದು ಎಲ್ಲರೂ ಕರೀತಾರೆ. ಅವರು ಶಾಸಕರಾಗಿ ಬಂದಿದ್ದೇ ಕಾಂಗ್ರೆಸ್ ಭಿಕ್ಷೆಯಿಂದ. ಆವತ್ತು ಒಂದು ವೇಳೆ ಕಾಂಗ್ರೆಸ್ ಅವರ ಎದುರು ನಾಗರಾಜ್ ಎಂಬ ಪ್ರಬಲ ಅಭ್ಯರ್ಥಿಯನ್ನು ಹಾಕಿದ್ದರೆ ವಿಜಯೇಂದ್ರ ಶಾಸಕರಾಗಿಯೇ ಇರುತ್ತಿರಲಿಲ್ಲ’ ಎಂದು ಡಿಕೆಶಿ ವ್ಯಂಗ್ಯವಾಗಿ ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಹಾಗಿದ್ದರೆ ಇಷ್ಟು ದಿನ ಯತ್ನಾಳ್ ಬಣ ವಿಜಯೇಂದ್ರ ಡಿಕೆಶಿ ಮತ್ತು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎನ್ನುವುದು ನಿಜವಾ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments