Webdunia - Bharat's app for daily news and videos

Install App

ಯಾರು ಏನೇ ಹೇಳಲಿ, ನನ್ನ ಧರ್ಮ ನನ್ನ ನಂಬಿಕೆ ನನ್ನದು: ಡಿಕೆ ಶಿವಕುಮಾರ್

Krishnaveni K
ಗುರುವಾರ, 27 ಫೆಬ್ರವರಿ 2025 (20:41 IST)
ಬೆಂಗಳೂರು: ಇಶಾ ಫೌಂಡೇಷನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಹಲವರು ಟೀಕೆ ಮಾಡುತ್ತಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಯಾರು ಏನೇ ಹೇಳಲಿ, ನನ್ನ ನಂಬಿಕೆ ನನಗೆ ದೊಡ್ಡದು ಎಂದಿದ್ದಾರೆ.

ಡಿಕೆ ಶಿವಕುಮಾರ್ ಇತ್ತೀಚೆಗೆ ಟೆಂಪಲ್ ರನ್, ಕುಂಭಮೇಳ ಪುಣ್ಯಸ್ನಾನ ಮಾಡಿದ ಬಳಿಕ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗುತ್ತಿದೆಯೇ ಎಂದು ಎಲ್ಲರ ಅನುಮಾನ. ಅದರಲ್ಲೂ ಇಶಾ ಫೌಂಡೇಷನ್ ನ ಸದ್ಗುರು ಆಹ್ವಾನದ ಮೇರೆಗೆ ಶಿವರಾತ್ರಿ ಕಾರ್ಯಕ್ರಮದಲ್ಲಿ ಗೃಹಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡ ಬಳಿಕ ಹಲವರು ಹುಬ್ಬೇರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ದೊಡ್ಡ ನಾಯಕರ ಮಾತಿಗೆ ಉತ್ತರ ನೀಡಲ್ಲ. ನಾನು ಹೋಗಿದ್ದು ಶಿವರಾತ್ರಿ ಕಾರ್ಯಕ್ರಮಕ್ಕೆ ಇದು ನನ್ನ ನಂಬಿಕೆ. ಯಾವ ಬಿಜೆಪಿಯವರೂ ಇದನ್ನು ಸ್ವಾಗತ ಮಾಡುವುದು ಬೇಡ. ಯಾರೂ ಈ ಬಗ್ಗೆ ಕಾಮೆಂಟ್ ಮಾಡುವುದು ಬೇಕಾಗಿಲ್ಲ’ ಎಂದಿದ್ದಾರೆ.

‘ಸಾವಿರ ಜನ ಸಾವಿರ ಮಾತನಾಡಲಿ. ಟ್ವೀಟ್ ಮಾಡಿ ಟೀಕೆ ಮಾಡುವವರಿಗೆಲ್ಲಾ ನಾನು ಉತ್ತರ ನೀಡಲ್ಲ. ಖುದ್ದು ಸದ್ಗುರು ಗುರೂಜಿ ಕರೆದಿದ್ದಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಅವರ ಒಳ್ಳೆಯ ಕೆಲಸಗಳನ್ನು ನಾನು ಮೆಚ್ಚಿಕೊಂಡಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ

Indian Army: ಗಡಿಯಲ್ಲಿ ಕಾಲು ಕೆರೆದುಕೊಂಡ ಪಾಕಿಸ್ತಾನ: ಭಾರತೀಯ ಯೋಧರ ಪ್ರತಿದಾಳಿಗೆ ಪಾಕ್ ಸೈನಿಕರು ಫಿನಿಶ್ (Video)

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

ಮುಂದಿನ ಸುದ್ದಿ
Show comments