Webdunia - Bharat's app for daily news and videos

Install App

ಯಾರು ಏನೇ ಹೇಳಲಿ, ನನ್ನ ಧರ್ಮ ನನ್ನ ನಂಬಿಕೆ ನನ್ನದು: ಡಿಕೆ ಶಿವಕುಮಾರ್

Krishnaveni K
ಗುರುವಾರ, 27 ಫೆಬ್ರವರಿ 2025 (20:41 IST)
ಬೆಂಗಳೂರು: ಇಶಾ ಫೌಂಡೇಷನ್ ನಲ್ಲಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಹಲವರು ಟೀಕೆ ಮಾಡುತ್ತಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಯಾರು ಏನೇ ಹೇಳಲಿ, ನನ್ನ ನಂಬಿಕೆ ನನಗೆ ದೊಡ್ಡದು ಎಂದಿದ್ದಾರೆ.

ಡಿಕೆ ಶಿವಕುಮಾರ್ ಇತ್ತೀಚೆಗೆ ಟೆಂಪಲ್ ರನ್, ಕುಂಭಮೇಳ ಪುಣ್ಯಸ್ನಾನ ಮಾಡಿದ ಬಳಿಕ ಅವರಿಗೆ ದೇವರ ಮೇಲೆ ಭಕ್ತಿ ಹೆಚ್ಚಾಗುತ್ತಿದೆಯೇ ಎಂದು ಎಲ್ಲರ ಅನುಮಾನ. ಅದರಲ್ಲೂ ಇಶಾ ಫೌಂಡೇಷನ್ ನ ಸದ್ಗುರು ಆಹ್ವಾನದ ಮೇರೆಗೆ ಶಿವರಾತ್ರಿ ಕಾರ್ಯಕ್ರಮದಲ್ಲಿ ಗೃಹಸಚಿವ ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡ ಬಳಿಕ ಹಲವರು ಹುಬ್ಬೇರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ‘ದೊಡ್ಡ ನಾಯಕರ ಮಾತಿಗೆ ಉತ್ತರ ನೀಡಲ್ಲ. ನಾನು ಹೋಗಿದ್ದು ಶಿವರಾತ್ರಿ ಕಾರ್ಯಕ್ರಮಕ್ಕೆ ಇದು ನನ್ನ ನಂಬಿಕೆ. ಯಾವ ಬಿಜೆಪಿಯವರೂ ಇದನ್ನು ಸ್ವಾಗತ ಮಾಡುವುದು ಬೇಡ. ಯಾರೂ ಈ ಬಗ್ಗೆ ಕಾಮೆಂಟ್ ಮಾಡುವುದು ಬೇಕಾಗಿಲ್ಲ’ ಎಂದಿದ್ದಾರೆ.

‘ಸಾವಿರ ಜನ ಸಾವಿರ ಮಾತನಾಡಲಿ. ಟ್ವೀಟ್ ಮಾಡಿ ಟೀಕೆ ಮಾಡುವವರಿಗೆಲ್ಲಾ ನಾನು ಉತ್ತರ ನೀಡಲ್ಲ. ಖುದ್ದು ಸದ್ಗುರು ಗುರೂಜಿ ಕರೆದಿದ್ದಕ್ಕೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಅವರ ಒಳ್ಳೆಯ ಕೆಲಸಗಳನ್ನು ನಾನು ಮೆಚ್ಚಿಕೊಂಡಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments