Webdunia - Bharat's app for daily news and videos

Install App

ಗಂಗೆ ಯಾರಪ್ಪನ ಸೊತ್ತಲ್ಲ, ನಾನು ಕುಂಭಮೇಳಕ್ಕೆ ಹೋಗಿಯೇ ಹೋಗ್ತೇನೆ: ಡಿಕೆ ಶಿವಕುಮಾರ್

Krishnaveni K
ಬುಧವಾರ, 5 ಫೆಬ್ರವರಿ 2025 (14:29 IST)
ಬೆಂಗಳೂರು: ಕುಂಭಮೇಳಕ್ಕೆ ಹೋಗಲು ಸಿದ್ಧರಾಗಿರುವ ಡಿಸಿಎಂ ಡಿಕೆ ಶಿವಕುಮಾರ್, ಗಂಗೆ ಯಾರಪ್ಪನ ಸೊತ್ತೂ ಅಲ್ಲ, ನಾನು ಕುಂಭಮೇಳಕ್ಕೆ ಹೋಗಿಯೇ ಹೋಗುತ್ತೇನೆ ಎಂದಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಂಭಮೇಳಕ್ಕೆ ಹೋಗಿ ಗಂಗೆಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತಾ ಎಂದು ಲೇವಡಿ ಮಾಡಿದ್ದರು. ಇದು ಭಾರೀ ಟೀಕೆಗೊಳಗಾಗಿತ್ತು. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗುವುದಾಗಿ ಹೇಳಿದ್ದರು.

ಡಿಕೆಶಿ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಖರ್ಗೆ ಹೇಳಿಕೆ ಉಲ್ಲೇಖಿಸಿ ಬಿಜೆಪಿ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದರು. ಡಿಕೆಶಿ ಕುಂಭಮೇಳಕ್ಕೆ ಹೋದರೆ ಪಾಪ ಪರಿಹಾರವಾಗುತ್ತಾ ಎಂದು ಕಾಲೆಳೆದಿದ್ದರು. ಈಗ ಅದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.

ಕುಂಭಮೇಳಕ್ಕೆ ಹೋಗುವುದು ನನ್ನ ವೈಯಕ್ತಿಕ ವಿಚಾರ. ನನ್ನ ವೈಯಕ್ತಿಕ ನಂಬಿಕೆ, ಭಕ್ತಿ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ. ಎಲ್ಲರಿಗೂ ಅವರದ್ದೇ ಆದ ನಂಬಿಕೆಗಳಿರುತ್ತವೆ. ಗಂಗೆ, ಕಾವೇರಿ, ಕೃಷ್ಣ, ಬ್ರಹ್ಮಪುತ್ರ ನದಿಗಳು ಯಾರಪ್ಪನ ಸೊತ್ತೂ ಅಲ್ಲ. ಹಾಗಾದರೆ ಅಶೋಕ್ ಯಾಕೆ ಅಶೋಕ್ ಎಂದು ಹೆಸರಿಟ್ಟುಕೊಂಡಿದ್ದಾರೆ? ಕಲ್ಲು ಮಣ್ಣು ಎಂದು ಇಡಬಹುದಿತ್ತಲ್ಲವೇ? ನನ್ನ ಬಗ್ಗೆ ಟೀಕಿಸುವ ಅಶೋಕ್ ಆಸ್ಪತ್ರೆಗೆ ಹೋಗಿ ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಡಿಕೆಶಿ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments