Webdunia - Bharat's app for daily news and videos

Install App

ಹಾಸನಾಂಬೆ ದರ್ಶನ, ಆದಾಯದಲ್ಲಿ ದಾಖಲೆ ಇದೆಲ್ಲಾ ಶಕ್ತಿ ಯೋಜನೆಯ ಸಾಧನೆ: ಡಿಸಿಎಂ ಡಿ.ಕೆ.ಶಿವಕುಮಾರ್

Krishnaveni K
ಸೋಮವಾರ, 4 ನವೆಂಬರ್ 2024 (09:41 IST)
ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ಶಕ್ತಿ ಯೋಜನೆಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್ ನಿಂದ ಚಾಮರಾಜನಗರದವರೆಗೆ ಬಳ್ಳಾರಿಯಿಂದ ಕೋಲಾರದವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು.

ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರ್ಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದು ಹೇಳಿದರು.

ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ.

ಮಾತ್ರವಲ್ಲ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ ವ್ಯವಸ್ಥೆ ಮಾಡಿದೆ. 9 ದಿನಗಳಲ್ಲಿ 19 ರಿಂದ 20 ಲಕ್ಷ ಜನ ದೇವಿಯ ದರ್ಶನ ಪಡೆದಿದ್ದಾರೆ ಎಂಬುದು ಸಣ್ಣ ವಿಚಾರವಲ್ಲ.

ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಬಹುತೇಕ ಉತ್ಸವ ಯಶಸ್ವಿಯಾಗಿದೆ‌. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು. ಜಿಲ್ಲಾಡಳಿತ ಹಾಗೂ ಶ್ರಮಿಸಿದ ಪೌರ ಕಾರ್ಮಿಕರು,‌ ಪೊಲೀಸರು, ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು, ಹಾಸನದ ನಾಗರಿಕರು ಹಾಗೂ ಎಲ್ಲ ಭಕ್ತರಿಗೂ ಕೃತಜ್ಞರಾಗಿದ್ದೇವೆ.

ಇಷ್ಟು ದೊಡ್ಡ ಸಂಖ್ಯೆಯ ಭಕ್ತರ ಭೇಟಿ ಐತಿಹಾಸಿಕ ದಾಖಲೆ. . ಎಲ್ಲರಿಗೂ ನಾವು ವೈಯಕ್ತಿಕವಾಗಿ, ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕ ಕೈಗೊಳ್ಳಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments