ಹೌದು ಮೋದಿ ಜೊತೆ ಮಾತನಾಡಿದ್ದೆ, ವೆರಿಗುಡ್ ಅಂದ್ರು, ಆದ್ರೆ ಬಿಜೆಪಿಗೆ ಮಾತ್ರ ಹೋಗಲ್ಲ: ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 12 ಆಗಸ್ಟ್ 2025 (10:37 IST)
ಬೆಂಗಳೂರು: ಮೋದಿ ಜೊತೆ ಮಾತನಾಡಿದ್ದು ಹೌದು, ವೆರಿಗುಡ್ ಎಂದಿದ್ದು ನಿಜ. ಆದರೆ ಬಿಜೆಪಿಗೆ ಹೋಗುವ ಯೋಚನೆ ಮಾತ್ರ ತಮಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮೆಟ್ರೋ ಯೆಲ್ಲೊ ಲೈನ್ ಉದ್ಘಾಟನೆಗೆ ಪ್ರಧಾನಿ ಮೋದಿ ಬಂದಿದ್ದಾಗ ಡಿಕೆ ಶಿವಕುಮಾರ್ ಒಬ್ಬರೇ ಮೋದಿ ಜೊತೆ ಮಾತನಾಡುತ್ತಿದ್ದುದು ಎಲ್ಲರ ಗಮನಕ್ಕೆ ಬಂದಿತ್ತು. ಈ ಬಗ್ಗೆ ವಿವರಣೆ ನೀಡಿದ್ದ ಡಿಕೆಶಿ ಬೆಂಗಳೂರು ಅಭಿವೃದ್ಧಿ ಬಗ್ಗೆ ಒಂದು ಪಟ್ಟಿ ಕೊಟ್ಟಿದ್ದೆ. ನಾವು ಕೈಗೊಂಡ ಯೋಜನೆಗಳ ಬಗ್ಗೆ ವಿವರಣೆ ನೀಡಿದ್ದೆ. ಇದಕ್ಕೆ ಮೋದಿಯವರು ವೆರಿಗುಡ್ ಡಿಕೆ ಎಂದರು ಎಂದಿದ್ದಾರೆ.

ಇನ್ನು, ಡಿಕೆಶಿ-ಮೋದಿ ಆಪ್ತ ಮಾತುಕತೆ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನ ಸಿಗದೇ ಇದ್ದರೆ ಡಿಕೆ ಶಿವಕುಮಾರ್ ಬಿಜೆಪಿಗೆ ಹೋಗಬಹುದೇ ಎಂಬ ಪ್ರಶ್ನೆ ಎದ್ದಿತ್ತು.

ಇದೆಲ್ಲದಕ್ಕೂ ಡಿಕೆಶಿ ಈಗ ಉತ್ತರ ನೀಡಿದ್ದಾರೆ. ದೇಶದಲ್ಲೇ ನಾನೊಬ್ಬ ಹಿರಿಯ ನಾಯಕ. ಸಾರ್ವಜನಿಕ ಜೀನವದಲ್ಲಿ ನನಗೂ ಸಾಕಷ್ಟು ಅನುಭವವಿದೆ. ಮೋದಿಯವರ ಜೊತೆ ಅಭಿವೃದ್ದಿ ಬಗ್ಗೆ ಅಷ್ಟೇ ಮಾತನಾಡಿದ್ದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments