Webdunia - Bharat's app for daily news and videos

Install App

ದೇವರ ಅನುಗ್ರಹದಿಂದ ಕೆಆರ್ ಎಸ್ ಭರ್ತಿಯಾಗ್ತಿದೆ, ತಮಿಳುನಾಡಿಗೆ ನೀರು ಬಿಡಬಹುದು: ಡಿಕೆ ಶಿವಕುಮಾರ್

Krishnaveni K
ಶನಿವಾರ, 20 ಜುಲೈ 2024 (13:35 IST)
ಬೆಂಗಳೂರು: ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆ ಆಗ್ತಿದೆ, ಕೆಆರ್ ಎಸ್ ಜಲಾಶಯ ಇನ್ನೇನು ಭರ್ತಿಯಾಗ್ತಿದೆ. ಹೀಗಾಗಿ ಕೋರ್ಟ್ ಹೇಳಿದ ಹಾಗೆ ತಮಿಳುನಾಡಿಗೆ ನೀರು ಬಿಡಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯ ಭಾರತ್ ಝೋಡೋ ಭವನದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಆರ್ ಎಸ್ ಭರ್ತಿಯಾಗ್ತಿದೆ. ಹೀಗಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ತೊಂದರೆಯಾಗದು ಎಂದುಕೊಳ್ತೀವಿ ಎಂದಿದ್ದಾರೆ.

ನಾವೀಗ ಕೆಲವು ಕಡೆ ನೀರು ಬಿಡಲೇಬೇಕಾಗುತ್ತದೆ. ಹೀಗಾಗಿ ಮುಂಜಾಗ್ರತವಾಗಿ ಹೆಚ್ಚು ಕಡಿಮೆ ಆಗಬಾರದು ಎಂದು ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಲ್ಲಿಸಿದ್ದೇವೆ. ಡ್ಯಾಮ್ ಅಕ್ಕಪಕ್ಕ ಇರುವ ಮನೆಗಳಿಗೆ ಎಚ್ಚರಿಕೆಯಿಂದಿರುವಂತೆ ಹೇಳಿದ್ದೇವೆ ಎಂದಿದ್ದಾರೆ.

ನಮ್ಮ ರೈತರ ಹಿತಕ್ಕೆ ಏನೆಲ್ಲಾ ಬೇಕು, ಕೆರೆಗಳನ್ನು ತುಂಬಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ. ಚಾನೆಲ್ ಗಳನ್ನು ಬಿಡುತ್ತಿದ್ದೇವೆ. ಕೃಷಿ ಇಲಾಖೆಯೊಂದಿಗೆ ಮಾತನಾಡಿದ್ದೇವೆ. ರೈತರಿಗೆ ಅನುಕೂಲವಾಗುವ ಹಾಗೆ ಎಲ್ಲಾ ಕೆಲಸ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments