ದೇವರ ಅನುಗ್ರಹದಿಂದ ಕೆಆರ್ ಎಸ್ ಭರ್ತಿಯಾಗ್ತಿದೆ, ತಮಿಳುನಾಡಿಗೆ ನೀರು ಬಿಡಬಹುದು: ಡಿಕೆ ಶಿವಕುಮಾರ್

Krishnaveni K
ಶನಿವಾರ, 20 ಜುಲೈ 2024 (13:35 IST)
ಬೆಂಗಳೂರು: ದೇವರ ಅನುಗ್ರಹದಿಂದ ರಾಜ್ಯದಲ್ಲಿ ಚೆನ್ನಾಗಿ ಮಳೆ ಆಗ್ತಿದೆ, ಕೆಆರ್ ಎಸ್ ಜಲಾಶಯ ಇನ್ನೇನು ಭರ್ತಿಯಾಗ್ತಿದೆ. ಹೀಗಾಗಿ ಕೋರ್ಟ್ ಹೇಳಿದ ಹಾಗೆ ತಮಿಳುನಾಡಿಗೆ ನೀರು ಬಿಡಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯ ಭಾರತ್ ಝೋಡೋ ಭವನದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಆರ್ ಎಸ್ ಭರ್ತಿಯಾಗ್ತಿದೆ. ಹೀಗಾಗಿ ತಮಿಳುನಾಡಿಗೆ ಬಿಡಬೇಕಾದ ನೀರು ಬಿಡಲು ತೊಂದರೆಯಾಗದು ಎಂದುಕೊಳ್ತೀವಿ ಎಂದಿದ್ದಾರೆ.

ನಾವೀಗ ಕೆಲವು ಕಡೆ ನೀರು ಬಿಡಲೇಬೇಕಾಗುತ್ತದೆ. ಹೀಗಾಗಿ ಮುಂಜಾಗ್ರತವಾಗಿ ಹೆಚ್ಚು ಕಡಿಮೆ ಆಗಬಾರದು ಎಂದು ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಲ್ಲಿಸಿದ್ದೇವೆ. ಡ್ಯಾಮ್ ಅಕ್ಕಪಕ್ಕ ಇರುವ ಮನೆಗಳಿಗೆ ಎಚ್ಚರಿಕೆಯಿಂದಿರುವಂತೆ ಹೇಳಿದ್ದೇವೆ ಎಂದಿದ್ದಾರೆ.

ನಮ್ಮ ರೈತರ ಹಿತಕ್ಕೆ ಏನೆಲ್ಲಾ ಬೇಕು, ಕೆರೆಗಳನ್ನು ತುಂಬಿಸಿಕೊಳ್ಳಲು ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ. ಚಾನೆಲ್ ಗಳನ್ನು ಬಿಡುತ್ತಿದ್ದೇವೆ. ಕೃಷಿ ಇಲಾಖೆಯೊಂದಿಗೆ ಮಾತನಾಡಿದ್ದೇವೆ. ರೈತರಿಗೆ ಅನುಕೂಲವಾಗುವ ಹಾಗೆ ಎಲ್ಲಾ ಕೆಲಸ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments