Webdunia - Bharat's app for daily news and videos

Install App

ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಕೆ ಶಿವಕುಮಾರ್

Krishnaveni K
ಬುಧವಾರ, 26 ಜೂನ್ 2024 (14:20 IST)
ಬೆಂಗಳೂರು: ಈಗಾಗಲೇ ಜನ ಹಾಲಿನ ದರ ಏರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ ಇಷ್ಟೂ ಸಾಲದು ಇನ್ನೂ ಹೆಚ್ಚು ಮಾಡಬೇಕಿತ್ತು ಎಂದಿದ್ದಾರೆ.

ಯಾರು ಬೇಕಾದರೂ ಬೈಯಲಿ, ವಿರೋಧ ಮಾಡಲಿ ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚು ಮಾಡಬೇಕಿತ್ತು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ರೀತಿಯಾಗಿ ಅವರು ಹಾಲಿನ ದರ ಏರಿಕೆ ಮಾಡಿದ ಕೆಂಎಎಫ್ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಹಾಲಿನ ದರ ಏರಿಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಬಿಜೆಪಿಯವರು ರೈತ ವಿರೋಧಿಗಳು ಎಂದು ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. ಹಾಲಿನ ದರ ಏರಿಕೆ ಮಾಡಿದರೆ ಅದು ರೈತರಿಗೆ ತಲುಪುತ್ತದೆ. ಈಗ ಏರಿಕೆ ಮಾಡಲಾಗಿರುವ 2 ರೂ. ರೈತರಿಗೆ ತಲುಪುತ್ತದೆ. ಹೀಗಾಗಿ ಇದಕ್ಕೆ ವಿರೋಧ ಮಾಡುತ್ತಿರುವ ಬಿಜೆಪಿಯವರು ರೈತರ ಪರ ಅಲ್ಲ ಎಂದಿದ್ದಾರೆ.

ಕೆಎಂಎಫ್ ಎಂದರೆ ರೈತರ ಒಕ್ಕೂಟ. ಹೀಗಾಗಿ ಇಲ್ಲಿ ಹಾಲಿನ ದರ ಏರಿಕೆ ಮಾಡಿದರೆ ಅದು ರೈತರಿಗೆ ಹೋಗುತ್ತದೆಯೇ ಹೊರತು ಅದರ ಅಧ್ಯಕ್ಷರಿಗೆ ಲಾಭವಾಗಲ್ಲ. ಕೆಎಂಎಫ್ ಉಳಿಯಬೇಕು. ಅಲ್ಲಿ ಇರೋದು ರೈತರೇ ಹೊರತು ವರ್ತಕರಲ್ಲ. ಯಾರು ಬೇಕಾದರೂ ವಿರೋಧ ಮಾಡಲಿ. ಹಾಲಿನ ದರ ನನ್ನ ಪ್ರಕಾರ ಇನ್ನೂ ಏರಿಕೆಯಾಗಬೇಕಿತ್ತು. ಬೇಕಿದ್ದರೆ ರೈತರನ್ನೇ ಹೋಗಿ ಕೇಳಲಿ. ರೈತರು ಹಸು ಸಾಕಲಾಗದೇ ಮಾರಾಟ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ಎಂದು ಬಿಜೆಪಿಯವರು ನೋಡಲಿ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments