ಬೆಲೆ ಏರಿಕೆಯಿಂದ ಜನ ತತ್ತರಿಸಿದ್ರು, ಸಹಾಯ ಮಾಡೋಣ ಎಂದು 5 ಗ್ಯಾರಂಟಿ ಕೊಟ್ಟೆವು: ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 11 ಮಾರ್ಚ್ 2025 (14:35 IST)
ಬೆಂಗಳೂರು: ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಕ್ಕೆ ನಾವು ಐದು ಗ್ಯಾರಂಟಿ ಕೊಟ್ಟೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಇಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಈ ವೇಳೆ ವಿಪಕ್ಷ ಸದಸ್ಯರು ಗದ್ದಲವೆಬ್ಬಿಸಿದ್ದಾರೆ.

ಸದನದಲ್ಲಿ ಇಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದ ಉದ್ದೇಶ ವಿವರಿಸಿದರು. ಈ ವೇಳೆ, ಜನ ಬೆಲೆ ಏರಿಕೆಯಿಂದ ಈ ದೇಶದ ಜನ ತತ್ತರಿಸುತ್ತಿದ್ದರು. ಆ ದೃಷ್ಟಿಯಿಂದ ನಾವು ಇಡೀ ದೇಶ ಯಾತ್ರೆ ಮಾಡಿ ಜನರು ಬೆಲೆ ಏರಿಕೆಯಿಂದ ಕಷ್ಟಪಡುತ್ತಿದ್ದುದನ್ನು ಮನಗಂಡೆವು.

ಇದೇ ಕಾರಣಕ್ಕೆ ಜನಕ್ಕೆ ಏನಾದರೂ ಸಹಾಯ ಮಾಡೋಣ ಅಂತ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು  ಎಂದು ಡಿಕೆ ಶಿವಕುಮಾರ್ ಹೇಳುತ್ತಿದ್ದಂತೇ ಬಿಜೆಪಿ ಜೋರಾಗಿ ಕೂಗಿ ವ್ಯಂಗ್ಯ ಮಾಡಿತು. ಈ ವೇಳೆ ಆಡಳಿತ ಪಕ್ಷದ ಸದಸ್ಯರೂ ತಿರುಗೇಟು ನೀಡಲು ಮುಂದಾದರು.

ಆಗ ಡಿಕೆ ಶಿವಕುಮಾರ್, ಕೇಳೋದಿದ್ರೆ ಕೇಳಿ. ನನಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ಹೇಳಲು ಕರೆದಿದ್ದಾರೆ ಅದಕ್ಕೆ ಉತ್ತರ ಕೊಡುತ್ತಿದ್ದೇನೆ ಎಂದರು. ಬಳಿಕ ಕೂಗುತ್ತಿದ್ದ ಸ್ವಪಕ್ಷ ಶಾಸಕರನ್ನೂ ಸುಮ್ಮನಾಗಿಸಿ ಮಾತು ಮುಂದುವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments