ಬೇರೆ ಪಾರ್ಟಿಯವರು ನನ್ನ ಮೇಲೆ ಆರೋಪ ಮಾಡುತ್ತಾರೆ

Webdunia
ಬುಧವಾರ, 29 ಡಿಸೆಂಬರ್ 2021 (18:57 IST)
ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ಎಲ್ಲವೂ ನನಗೆ ಗೊತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
 
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:
 
'ಕುಮಾರಸ್ವಾಮಿ ಅವರು ಬಹಳ ಹಿರಿಯರು, ಬುದ್ಧಿವಂತರು ಹಾಗೂ ಸಾಹಿತಿಗಳಿದ್ದಾರೆ, ಅವರಿಗೆ ರಾಜಕಾರಣದಲ್ಲಿ ಬಹಳ ಅನಭವವಿದೆ.
ನಾಡ ಹಿತಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ನಮ್ಮ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕುಮಾರಸ್ವಾಮಿ ಅವರ ಟ್ವೀಟ್ ಟೀಕೆಗೆ ನಾವು ಉತ್ತರ ನೀಡಬೇಕಾಗುತ್ತದೆ. ಅವರ ಮಾತಿನಲ್ಲಿ ಸಾಹಿತ್ಯದ ಶಬ್ಧಕೋಶವೇ ಅಡಗಿದ್ದು, ನಾನು ಅದನ್ನು ಕಲಿತುಕೊಳ್ಳುತ್ತೇನೆ. ರಾಜಕೀಯದಲ್ಲಿ ಗೆಲವು, ಸೋಲು ಸಹಜ. ಅದರಿಂದ ಅನುಭವ ಬರುತ್ತದೆ. ಅವರು ಟೀಕೆ ಮಾಡಲಿ. ಆದರೆ ಆಶ್ಚರ್ಯ ಎಂದರೆ, ಚನ್ನಪಟ್ಟಣದಲ್ಲಿ ಫೈರಿಂಗ್ ಆಯ್ತು ಎಂದು ಎಸ್.ಎಂ. ಕೃಷ್ಣ ಅವರ ಸರ್ಕಾರದ ವಿರುದ್ಧ ಪಾದಯಾತ್ರೆ ಮಾಡಿದರು. ಗಂಗಾಧರಮೂರ್ತಿ ಕೊಲೆ ಪ್ರಕರಣ ಸಂಬಂಧ ಪಾದಯಾತ್ರೆ ಮಾಡಿದರು. ತಲೆ ಮೇಲೆ ಸೀಮೆಎಣ್ಣೆ ಡಬ್ಬ ಇಟ್ಟುಕೊಂಡು ಪ್ರತಿಭಟನೆ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಪಾದಯಾತ್ರೆ ಮಾಡುತ್ತಿದೆ. ಮಾಜಿ ಪ್ರಧಾನಿ ಚಂದ್ರಶೇಖರ್, ದೇವೆಗೌಡರು ಮಾಡಿದ್ದಾರೆ. ಬಿಜೆಪಿಯವರು ರಥಯಾತ್ರೆ ಮಾಡಿದ್ದಾರೆ. ನೆರೆರಾಜ್ಯದ ಜಗನ್ ಮೋಹನ್ ರೆಡ್ಡಿ ಅವರು ಪಾದಯಾತ್ರೆ ಮಾಡಿದ್ದಾರೆ. ದೇಶದ ರೈತರು ಕೂಡ ಹೋರಾಟ ಮಾಡಿದ್ದಾರೆ. ಇವೆಲ್ಲ ಹೋರಾಟಗಳ ಮೈಲಿಗಲ್ಲು. ಕೆಲವಕ್ಕೆ ಫಲ ಸಿಕ್ಕರೆ, ಕೆಲವಕ್ಕೆ ಸಿಕ್ಕಿಲ್ಲ. ಎಲ್ಲರಿಗೂ ಫಲ ಸಿಗಬೇಕು ಎಂಬುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments