Webdunia - Bharat's app for daily news and videos

Install App

ಈ ಬಾರಿಯ ಗೌರಿ ಹಬ್ಬದಂದು ಗಂಗೆ ಬರ್ತಿದ್ದಾಳೆ: ಡಿಸಿಎಂ ಡಿ.ಕೆ. ಶಿವಕುಮಾರ್

Krishnaveni K
ಗುರುವಾರ, 5 ಸೆಪ್ಟಂಬರ್ 2024 (15:22 IST)
ಬೆಂಗಳೂರು: ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

"ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿ ನಾಳೆ ಉದ್ಘಾಟನೆಯಾಗುತ್ತಿದೆ. ಇಲ್ಲಿಂದ 24 ಟಿಎಂಸಿ ನೀರನ್ನು ಎತ್ತಿ ಬರ ಪೀಡಿತ ಪ್ರದೇಶಗಳಲ್ಲಿ ಕುಡಿಯುವ ಉದ್ದೇಶಕ್ಕೆ ಪೂರೈಸಲಾಗುತ್ತಿದೆ. ಡಿಪಿಆರ್ ಮಾಡಿದ ಎಂಜಿನಿಯರ್ ಗಳಿಂದ ತಂತ್ರಜ್ಞರು, ಯೋಜನೆಗಾಗಿ ಜಮೀನು ನೀಡಿದ ರೈತರು ಎಲ್ಲರ ಪಾತ್ರ ಪ್ರಮುಖವಾಗಿದೆ" ಎಂದು ತಿಳಿಸಿದರು.

"ಈ ಯೋಜನೆಗೆ ಬಳಸಲಾಗಿರುವ ಯಂತ್ರ, ನೀರೆತ್ತುವ ತಂತ್ರಜ್ಞಾನ ನೋಡಿದರೆ ಒಂದು ವಿಸ್ಮಯ. ಹೆಚ್ಚಿನ ಹಣ ಖರ್ಚು ಮಾಡಿ ಯೋಜನೆ ಮಾಡಲಾಗಿದ್ದು, ಅಂತರ್ಜಲ ಹೆಚ್ಚಳಕ್ಕೆ ಈ ಯೋಜನೆ ಸಹಕಾರಿಯಾಗಿದೆ" ಎಂದರು.

"ಈ ಯೋಜನೆಯಿಂದ ನೀರು ತರಲು ಸಾಧ್ಯವೇ ಇಲ್ಲ. ನೀರು ಬಂದರೆ ಮೀಸೆ ಬೊಳಿಸಿಕೊಳ್ಳುತ್ತೇನೆ ಎಂದೆಲ್ಲಾ ಕೆಲವರು ಟೀಕೆ ಮಾಡಿದ್ದರು. ಹೀಗಾಗಿ ನಾನು ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿ ಮೊದಲ ಹಂತದ ಕಾಮಗಾರಿ ಮುಗಿಸಿ ನೀರನ್ನು ಎತ್ತಿದ್ದೇವೆ" ಎಂದು ತಿಳಿಸಿದರು.

"ಈ ಯೋಜನೆ ಮಾರ್ಗದಲ್ಲಿ ಕೆಲವು ಅರಣ್ಯ ಪ್ರದೇಶಗಳಲ್ಲಿ ಸಮಸ್ಯೆ ಇರುವ ಕಾರಣ ನೀರನ್ನು ವಾಣಿ ವಿಲಾಸ ಅಣೆಕಟ್ಟಿಗೆ ಹರಿಸಲಾಗುತ್ತಿದೆ. ಈ ಸಮಸ್ಯೆ ಬಗೆಹರಿದು ಕಾಮಗಾರಿ ಮುಗಿದರೆ ಈ ವರ್ಷದೊಳಗೆ ತುಮಕೂರಿನವರೆಗೆ ನೀರನ್ನು ತರಲಾಗುವುದು" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಈ ಯೋಜನೆ ಉದ್ಘಾಟನೆ ಒಂದು ಹಬ್ಬವಾಗಿದೆ. ಗೌರಿ ಹಬ್ಬ ಪ್ರತಿ ವರ್ಷ ಬರುತ್ತದೆ. ಆದರೆ ನಾಳೆ ಗೌರಿ ಹಬ್ಬದ ದಿನ ಗಂಗೆ ಪೂಜೆ ಮಾಡುವುದು ಬಹಳ ವಿಶೇಷ. ಎಲ್ಲಾ ಪಕ್ಷದ ನಾಯಕರಿಗೆ, ಶಾಸಕರು, ರೈತ ಮುಖಂಡರು ಕಾರ್ಯಕ್ರಮಕ್ಕೆ ಬಂದು ಈ ಗಳಿಗೆಗೆ ಸಾಕ್ಷೀಯಾಗಬೇಕು ಎಂದು ಮನವಿ ಮಾಡುತ್ತೇನೆ" ಎಂದರು.

"ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿ ಹಿನ್ನೆಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೇನೆ" ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments