ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

Krishnaveni K
ಮಂಗಳವಾರ, 17 ಜೂನ್ 2025 (11:17 IST)
ಬೆಂಗಳೂರು: ಏನೇ ಆದ್ರೂ 28 ಕ್ಕೆ ಪ್ರಮಾಣವಚನ ಮಾಡ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಅವರು ಹೀಗೆ ಹೇಳುವುದಕ್ಕೂ ಕಾರಣವಿದೆ.

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಇದಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಈ ರೀತಿ ತಿರುಗೇಟು ನೀಡಿದ್ದಾರೆ.

ಬಿಜೆಪಿಯವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ಮೊನ್ನೆ ನಾನೂ ಅಹಮದಾಬಾದ್ ಗೆ ವಿಮಾನ ದುರಂತವಾದ ಸ್ಥಳಕ್ಕೆ ಹೋಗಿದ್ದೆ. ಹಾಗಂತ ನಾನು ಘಟನೆಗೆ ಕೇಂದ್ರ ಸರ್ಕಾರವನ್ನು ದೂಷಿಸಿದ್ದೀನಾ? ಮೊನ್ನೆ ಅದೇನೋ ಕುಂಬಮೇಳ ಆಯ್ತಲ್ಲಾ ಅಲ್ಲಿ ಕಾಲ್ತುಳಿತವಾಗಿ ಸಾಕಷ್ಟು ಜನ ಸಾವನ್ನಪ್ಪಿದ್ದರು. ನಾವು ಏನಾದ್ರೂ ಹೇಳಿದ್ವಾ?

ನೋಡಿ ಸಾಕಷ್ಟು ಕಡೆ ಕಾಲ್ತುಳಿತವಾದ ಉದಾಹರಣೆಯಿದೆ. ಅದಕ್ಕೆಲ್ಲಾ ಅಲ್ಲಿನ ಸರ್ಕಾರವೇ ಹೊಣೆ ಎನ್ನಕ್ಕಾಗುತ್ತಾ? ಬಿಜೆಪಿ ನಾಯಕರಿಗೆ ನಮ್ಮನ್ನು ಕಂಡರೆ ಭಯ.  ಆ ಭಯಕ್ಕೆ ಏನೇನೋ ಹೇಳ್ತಾರೆ ಎಂದ ಡಿಕೆಶಿ ಕೊನೆಗೆ ನಾಡಿದ್ದು 28 ಕ್ಕೆ ಮತ್ತೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ನೀವೂ ಬನ್ನಿ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ಪತ್ರಕರ್ತರು ನೀವು ಸಿಎಂ ಆಗಿ ಪ್ರಮಾಣ ವಚನನಾ ಎಂದು ಕಾಲೆಳೆದಿದ್ದಾರೆ. ಇಲ್ಲ ಕಾಂಗ್ರೆಸ್ ಸರ್ಕಾರ ಎಂದು ಡಿಕೆಶಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments