ಮೈಸೂರಿನಲ್ಲಿ ದಾಳಿ ಮಾಡಿದವರು ಹುಡುಗರು: ಪೊಲೀಸರದ್ದು ತಪ್ಪಿಲ್ಲ ಎಂದ ಡಿಕೆ ಶಿವಕುಮಾರ್

Krishnaveni K
ಬುಧವಾರ, 12 ಫೆಬ್ರವರಿ 2025 (11:58 IST)
ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ದಾಳಿ ಮಾಡಿದವರು ಹುಡುಗರು, ಇದರಲ್ಲಿ ಪೊಲೀಸರದ್ದು ತಪ್ಪಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಗೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮ್ ಯುವಕರು ಆರೋಪಿಯನ್ನು ಬಂಧಿಸಿಟ್ಟಿದ್ದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲೆಸೆದು ದಾಂಧಲೆ ನಡೆಸಿದ್ದರು.

ಅಷ್ಟೇ ಅಲ್ಲದೆ ಪೊಲೀಸರಿಗೂ ಘಟನೆಯಲ್ಲಿ ಗಾಯಗಳಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಕೆಎನ್ ರಾಜಣ್ಣ ಪೊಲೀಸರ ಮೇಲೆ ಗೂಬೆ ಕೂರಿಸಿದ್ದರು. ಮುಸ್ಲಿಮರೇ ಹೆಚ್ಚು ಜನಸಂಖ್ಯೆಯಿರುವ ಉದಯಗಿರಿ ಪೊಲೀಸ್ ಠಾಣೆಯಲ್ಲೇ ಆರೋಪಿಯನ್ನು ಬಂಧಿಸಿಟ್ಟಿದ್ದು ಪೊಲೀಸರ ತಪ್ಪು ಎಂದಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಯಾರು ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ ಉಪಮುಖ್ಯಮಂತ್ರಿಯಾಗಿ ಹೇಳ್ತಿದ್ದೇನೆ. ಇದರಲ್ಲಿ ಪೊಲೀಸರ ತಪ್ಪಿಲ್ಲ. ದಾಂಧಲೆ ನಡೆಸಿದವರು 14-15 ವಯಸ್ಸಿನ ಹುಡುಗರು. ಅವರು ಯಾರೂ ಪೊಲೀಸರ ಮಾತು ಕೇಳಲಿಲ್ಲ. ಈಗ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments