ಸಿದ್ದರಾಮಯ್ಯ ಡಿನ್ನರ್ ಮೀಟ್ ಗೆ ಡಿಕೆ ಶಿವಕುಮಾರ್ ಇಲ್ಲ: ಆದ್ರೂ ಕನಕಪುರ ಬಂಡೆ ಮಾಡಿದ್ದೇನು

Krishnaveni K
ಗುರುವಾರ, 11 ಡಿಸೆಂಬರ್ 2025 (13:48 IST)
ಬೆಳಗಾವಿ: ವಿಧಾನಸಭೆ ಅಧಿವೇಶನದ ನಡುವೆಯೂ ಕಾಂಗ್ರೆಸ್ ನಲ್ಲಿ ಒಳಗೊಳಗೇ ಶಕ್ತಿ ಪ್ರದರ್ಶನ ನಡೆಯುತ್ತಿದೆ. ನಿನ್ನೆ ಸಿದ್ದರಾಮಯ್ಯ ಬೆಂಬಲಿತ ಶಾಸಕರಿಂದ ಡಿನ್ನರ್ ಮೀಟಿಂಗ್ ನಡೆದಿತ್ತು. ಇದಕ್ಕೆ ಆಹ್ವಾನವಿಲ್ಲದಿದ್ದರೂ ಡಿಕೆ ಶಿವಕುಮಾರ್ ಮಾಡಿದ್ದೇನು ಗೊತ್ತಾ?

ಹೈಕಮಾಂಡ್ ಹೇಳಿತೆಂದು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ ಬಳಿಕ ಡಿಕೆ ಶಿವಕುಮಾರ್ ಸೈಲೆಂಟ್ ಆಗಿದ್ದಾರೆ. ಯಾವುದೇ ವಿವಾದಿತ ಹೇಳಿಕೆ ಅಥವಾ ಮೀಟಿಂಗ್ ಗಳನ್ನು ನಡೆಸದೇ ತಾಳ್ಮೆಯಿಂದ ಕಾಯುತ್ತಿದ್ದಾರೆ. ಈ ನಡುವೆ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಯೇ ಐದು ವರ್ಷವೂ ಸಿಎಂ ಎಂದರೂ ಹೆಚ್ಚೇನು ಪ್ರತಿಕ್ರಿಯಿಸುವ ಗೋಜಿಗೂ ಹೋಗಲಿಲ್ಲ.

ಕಳೆದ ಕೆಲವು ದಿನಗಳಿಂದ ಡಿಕೆ ಶಿವಕುಮಾರ್ ಮೌನ ಮತ್ತು ತಾಳ್ಮೆಯ ಅಸ್ತ್ರಕ್ಕೆ ಮೊರೆ ಹೋಗಿದ್ದಾರೆ. ಈ ಹಂತದಲ್ಲಿ ಯಾವುದೇ ಹೇಳಿಕೆಗಳು, ನಡೆ ಹೈಕಮಾಂಡ್ ಅಸಮಾಧಾನಕ್ಕೆ ಗುರಿಯಾಗಬಹುದು ಎಂಬ ಅರಿವು ಅವರಿಗಿದೆ. ಈ ಕಾರಣಕ್ಕೆ ಸೈಲೆಂಟ್ ಆಗಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರನ್ನು ಬೆಂಬಲಿಸುವ ಅಹಿಂದ ನಾಯಕರ ಬಣ ಬೆಳಗಾವಿಯಲ್ಲಿ ಡಿನ್ನರ್ ಮೀಟ್ ನಡೆಸಿದೆ. ಈ ಔತಣಕೂಟಕ್ಕೆ ಡಿಕೆಶಿ ಮತ್ತು ಅವರ ಬೆಂಬಲಿಗರಿಗೆ ಆಹ್ವಾನವಿರಲಿಲ್ಲ ಎನ್ನಲಾಗಿದೆ. ಹಾಗಿದ್ದರೂ ಡಿಕೆಶಿ ಈ ಕುರಿತು ಒಂದೇ ಒಂದು ಅಸಮಾಧಾನ ಅಥವಾ ಬಹಿರಂಗ ಹೇಳಿಕೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ. ಅವರ ತಾಳ್ಮೆಯ ಬಗ್ಗೆ ಇಂದು ಸದನದಲ್ಲಿ ವಿಪಕ್ಷ ನಾಯಕರು ಡಿಕೆಶಿ ಕಾಲೆಳೆದಿದ್ದಾರೆ. ಆಗಲೂ ಕೇವಲ ನಗುವೇ ಅವರ ಉತ್ತರವಾಗಿತ್ತು ಎಂಬುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಮುಂದಿನ ಸುದ್ದಿ
Show comments