ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ ಮೈತ್ರಿಯನ್ನು ಗೆಲ್ಲಿಸುವಂತೆ ಮತದಾರರಿಗೆ ಮನವಿಯನ್ನು ಮಾಡಿದ್ದಾರೆ.
ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
'ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಬಿಹಾರದ ಮುಂದಿನ ಮುಖ್ಯಮಂತ್ರಿ ಮತ್ತು ರಾಹುಲ್ ಗಾಂಧಿ ಅವರನ್ನು ದೇಶದ ಮುಂದಿನ ಪ್ರಧಾನಿಯನ್ನಾಗಿ ಮಾಡಲು ಮಹಾಘಟಬಂಧನ ಮೈತ್ರಿಯನ್ನು ಬೆಂಬಲಿಸುವಂತೆ ಬಿಹಾರದ ಎಲ್ಲ ಸಹೋದರ ಸದೋದರಿಯರಲ್ಲಿ ವಿನಂತಿ ಮಾಡುತ್ತೇನೆ' ಎಂದಿದ್ದಾರೆ.
'ಅಭಿವೃದ್ಧಿ, ನ್ಯಾಯ ಹಾಗೂ ಬಲಿಷ್ಠ ಭಾರತಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲೋಣ' ಎಂದು ಅವರು ಕರೆ ನೀಡಿದ್ದಾರೆ.