ಚುನಾವಣೆ ಮುಗಿದ ಬೆನ್ನಲ್ಲೇ ರೆಸಾರ್ಟ್ ಗೆ ತೆರಳಿದ ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 7 ಮೇ 2024 (11:54 IST)
ಬೆಂಗಳೂರು: ಚುನಾವಣೆ ಮುಗಿದ ಬೆನ್ನಲ್ಲೇ ರಾಜಕೀಯ ನಾಯಕರು ರಿಲ್ಯಾಕ್ಸ್ ಮಾಡುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಚಿಕ್ಕಮಗಳೂರಿಗೆ ತೆರಳಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಡಿಕೆ ಶಿವಕುಮಾರ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಹೀಗಾಗಿ ಬಿಡುವಿಲ್ಲದೇ ಊರೂರು ಸುತ್ತಿ ಸುಸ್ತಾಗಿರುವ ಡಿಕೆಶಿ ಈಗ ಕುಟುಂಬ ಸಮೇತರಾಗಿ ರಿಲ್ಯಾಕ್ಸ್ ಆಗಲು ರೆಸಾರ್ಟ್ ಮೊರೆ ಹೋಗಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಡಿಕೆಶಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಮೇಲೆ ವಕೀಲ ಹಾಗೂ ಬಿಜೆಪಿ ನಾಯಕ ದೇವರಾಜೇಗೌಡ ಪೆನ್ ಡ್ರೈವ್  ಹಂಚಿದ ಆರೋಪ ಮಾಡಿದ್ದರು. ಪೆನ್ ಡ್ರೈವ್ ಮಾಡಿಸಿದವರು ಯಾರು ಎಂದು ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಡಿಕೆ ಶಿವಕುಮಾರ್ ಈಗ ರಾಜಕೀಯಗಳಿಂದ ಕೊಂಚ ಬಿಡುವು ಪಡೆದು ಕುಟುಂಬದ ಕಾಲ ಕಳೆಯಲು ನಿರ್ಧರಿಸಿದ್ದಾರೆ. ಇಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಇದಾದ ಬಳಿಕ ರಾಜ್ಯ ನಾಯಕರಿಗೆ ವಿರಾಮ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments