Webdunia - Bharat's app for daily news and videos

Install App

DK Shivakumar: ಸಂವಿಧಾನದ ಬದಲಿಸುವ ಮಾತನಾಡಿ ರಾಹುಲ್ ಗಾಂಧಿಗೇ ಮುಜುಗರ ತಂದಿಟ್ಟರಾ ಡಿಕೆಶಿ

Krishnaveni K
ಸೋಮವಾರ, 24 ಮಾರ್ಚ್ 2025 (16:31 IST)
ಬೆಂಗಳೂರು: ಸಂವಿಧಾನ ಬದಲಿಸುವ ಮಾತನಾಡಿ ಕಾಂಗ್ರೆಸ್ ಉನ್ನತ ನಾಯಕ ರಾಹುಲ್ ಗಾಂಧಿಗೇ ಡಿಸಿಎಂ ಡಿಕೆ ಶಿವಕುಮಾರ್ ಮುಜುಗರ ತಂದಿಟ್ಟರಾ? ಹೀಗೊಂದು ಚರ್ಚೆ ಇದೀಗ ಶುರುವಾಗಿದೆ.

ಸಂವಾದ ಕಾರ್ಯಕ್ರಮವೊಂದರಲ್ಲಿ ಡಿಕೆ ಶಿವಕುಮಾರ್, ಮುಸ್ಲಿಮರಿಗಾಗಿ ಸಂವಿಧಾನವೂ ಬದಲಾಗುತ್ತದೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನೇ ಬಿಜೆಪಿ ಪ್ರಮುಖ ಅಸ್ತ್ರ ಮಾಡಿಕೊಂಡಿದೆ.

ಈ ಬಗ್ಗೆ ಲೇವಡಿ ಮಾಡಿರುವ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಎಲ್ಲೇ ಹೋದ್ರೂ ಸಂವಿಧಾನ ಪುಸ್ತಕ ಹಿಡಿದು ಪ್ರದರ್ಶನ ಮಾಡುವ ರಾಹುಲ್ ಗಾಂಧಿಗೆ ಡಿಕೆ ಶಿವಕುಮಾರ್ ಈ ಮಾತು ಹೇಳಲಿ ಎಂದು ಟಾಂಗ್ ಕೊಟ್ಟಿದ್ದಾರೆ.

ಇನ್ನು, ಡಿಕೆಶಿ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೇ ಹೈಕಮಾಂಡ್ ಅವರಿಗೆ ಕರೆ ಮಾಡಿ ವಿಚಾರಣೆ ನಡೆಸಿದೆ ಎಂದೂ ಹೇಳಲಾಗುತ್ತಿದೆ. ರಾಹುಲ್ ಗಾಂಧಿ ಇದುವರೆಗೆ ಕೇಂದ್ರ ಸರ್ಕಾರದ ವಿರುದ್ಧ ಸಂವಿಧಾನ ಪುಸ್ತಕ ಹಿಡಿದುಕೊಂಡು ವಾಗ್ದಾಳಿ ನಡೆಸುತ್ತಲೇ ಇದ್ದರು. ಆದರೆ ಈಗ ಅವರದ್ದೇ ಪಕ್ಷದ ನಾಯಕರು ಸಂವಿಧಾನ ಬದಲಿಸುವ ಹೇಳಿಕೆ ನೀಡಿರುವುದು ಅವರಿಗೇ ಮುಜುಗರ ತಂದಿಟ್ಟಂತೆ. ಇನ್ನು, ತಮ್ಮ ಹೇಳಿಕೆ ವಿವಾದವಾಗುತ್ತಿದ್ದಂತೇ ಸ್ಪಷ್ಟನೆ ನೀಡಿರುವ ಡಿಕೆಶಿ ನಾನು ಸಂವಿಧಾನ ಬದಲಿಸುವುದಾಗಿ ಹೇಳಿಯೇ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments