ದೆಹಲಿಗೆ ಹೋಗುವ ಮುನ್ನ ನಾಯಕತ್ವ ವಿವಾದದ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Krishnaveni K
ಮಂಗಳವಾರ, 10 ಫೆಬ್ರವರಿ 2026 (10:39 IST)
ಬೆಂಗಳೂರು: ದೆಹಲಿಗೆ ಹೋಗುವ ಮುನ್ನ ನಾಯಕತ್ವ ವಿವಾದದ ಬಗ್ಗೆ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆಯೊಂದನ್ನು ಮಾಧ್ಯಮಗಳಿಗೆ ನೀಡಿದ್ದಾರೆ.

ಇಂದು ಪಂಚ ರಾಜ್ಯಗಳ ಚುನಾವಣೆ ತಯಾರಿ ಬಗ್ಗೆ ಪ್ರಿಯಾಂಕ ಗಾಂಧಿ ವಾದ್ರಾ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಬೆಳಿಗ್ಗೆ ದೆಹಲಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದೆಹಲಿಗೆ ಹೋದ ಮೇಲೆ ಎಲ್ಲಾ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬರೋದೇ. ಚುನಾವಣೆ ತಯಾರಿ ಬಗ್ಗೆ ಮಾತನಾಡಲು ಎಐಸಿಸಿಯಿಂದ ಕರೆದಿದ್ದಾರೆ. ಅದಕ್ಕೆ ಹೋಗುತ್ತಿದ್ದೇನೆ. ನನಗೆ ಪ್ರತಿದಿನವೂ ಗುಡ್ ನ್ಯೂಸ್. ಪ್ರತಿದಿನವೂ ಸವಾಲುಗಳು, ಕಷ್ಟಗಳು ಇದ್ದೇ ಇರುತ್ತವೆ. ಟೀಕೆಗಳೂ ಬರುತ್ತಾ ಇರುತ್ತದೆ, ಎದುರಿಸಿ ಕೆಲಸ ಮುಂದುವರಿಸಬೇಕು’ ಎಂದಿದ್ದಾರೆ.

ಇನ್ನು, ನಾಯಕತ್ವ  ವಿವಾದದ ಬಗ್ಗೆ ಮಾತನಾಡುತ್ತೀರಾ ಎಂದು ಕೇಳಿದ್ದಕ್ಕೆ ‘ಗೊಂದಲ ಏನೂ ಇಲ್ಲ. ನನಗೆ ಯಾವುದೇ ಗೊಂದಲ ಇಲ್ಲ. ನಾನು ಸಿದ್ದರಾಮಯ್ಯನವರು ಏನು ಮಾತನಾಡಿದ್ದೀವಿ ಎಂದು ನಮಗೆ ಗೊತ್ತು. ನಾವು ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಮಾತನಾಡಿದ್ದೀವಿ. ಬೇರೆಯವರು ಇದರ ಬಗ್ಗೆ ಟೆನ್ಷನ್ ತೆಗೆದುಕೊಳ್ಳುವುದು ಹೇಳಿಕೆ ಕೊಡುವುದರಿಂದ ಯಾವ ಪ್ರಯೋಜನವೂ ಆಗಲ್ಲ. ಅದು ಯಾರೇ ಹೇಳಿಕೆ ಕೊಡುತ್ತಿದ್ದರೂ ಅದು ಪಕ್ಷಕ್ಕೆ ಡ್ಯಾಮೇಜ್ ಅಷ್ಟೇ ಬೇರೇನಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments