Publish Date: Wed, 03 Jun 2026 (16:17 IST)
Updated Date: Wed, 03 Jun 2026 (16:22 IST)
ಬೆಂಗಳೂರು: ಕರ್ನಾಟಕದ 25 ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ವಿಶೇಷ ವ್ಯಕ್ತಿಯ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಲೋಕಭವನದಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ತಮ್ಮ ಆಪ್ತರು, ಗಣ್ಯರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದ ಗ್ರಹಣ ಮಾಡಿದ್ದಾರೆ. ಈ ಪದ ಗ್ರಹಣ ಸಮಾರಂಭದಲ್ಲಿ ರೇಷ್ಮೆ ಜುಬ್ಬಾ, ಪಂಚೆ, ಶಾಲು ಧರಿಸಿ ಡಿಕೆಶಿ ಮಿಂಚಿದರು.
ಪದ ಗ್ರಹಣ ಸಮಾರಂಭಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್, ಕೇರಳಂ ಸಿಎಂ ವಿಡಿ ಸತೀಶನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಸಿದ್ದರಾಮಯ್ಯನವರು ಸಾಕ್ಷಿಯಾಗಿದ್ದರು. ಇದಲ್ಲದೆ ಸಾಕಷ್ಟು ಮಠಾಧೀಶರು, ಕಾಂಗ್ರೆಸ್ ಶಾಸಕರು, ವಿವಿಧ ಧರ್ಮದ ನಾಯಕರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಿಕೆ ಶಿವಕುಮಾರ್ ಅಜ್ಜ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೇ ಅಭಿಮಾನಿಗಳಿಂದ ಭಾರೀ ಜೈಕಾರ ಕೇಳಿಬಂತು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ