ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

Krishnaveni K
ಬುಧವಾರ, 15 ಅಕ್ಟೋಬರ್ 2025 (11:08 IST)
ಬೆಂಗಳೂರು: ಬೆಂಗಳೂರು ರಸ್ತೆ ಬಗ್ಗೆ ಉದ್ಯಮಿ ಕಿರಣ್ ಮಜುಂದಾರ್ ಷಾ ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಕ್ಕೆ ಈಗ ಡಿಕೆ ಶಿವಕುಮಾರ್ ಫೋಟೋ ಸಮೇತ ತಿರುಗೇಟು ನೀಡಿದ್ದಾರೆ.

ಬಯೋಕಾನ್ ಗೆ ಭೇಟಿ ನೀಡಿದ್ದ ವಿದೇಶೀ ಸಂದರ್ಶಕರೊಬ್ಬರು ಬೆಂಗಳೂರಿನ ರಸ್ತೆ ಯಾಕೆ ಹೀಗಿದೆ ಎಂದು ಪ್ರಶ್ನೆ ಮಾಡಿದರು. ಯಾಕೆ ಇಲ್ಲಿನ ರಸ್ತೆಗಳು ಇಷ್ಟು ಕೆಟ್ಟದಾಗಿವೆ, ಸರ್ಕಾರ ಹೂಡಿಕೆ ದಾರರಿಗೆ ಬೆಂಬಲ ನೀಡುತ್ತಿಲ್ಲವೇ? ಎಂದು ನನ್ನ ಕೇಳಿದರು ಎಂದು ಕಿರಣ್ ಮಜುಂದಾರ್ ಷಾ ಟ್ವೀಟ್ ಮಾಡಿ ಟೀಕಿಸಿದ್ದರು.

ಇದಕ್ಕೆ ಕಿರಣ್ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದರು. ಇದೇ ಮಾತನ್ನು ಬೇರೆ ರಾಜ್ಯದಲ್ಲಿ ಹೇಳಿದ್ದರೆ ಜೈಲಿಗೆ ಹಾಕುತ್ತಿದ್ದರು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದೀಗ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ.

ಜೊತೆಗೆ ‘ಸುಗಮ ಸಂಚಾರವೇ ಸರ್ಕಾರದ ಮೊದಲ ಆದ್ಯತೆ! ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ನಗರದ ವಿವಿಧೆಡೆ ರಸ್ತೆಗೆ ಡಾಂಬರೀಕರಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಿ ಸಾಗಿದೆ’ ಎಂದು ಕಿರಣ್ ಮಜುಂದಾರ್ ಗೆ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments