ಶಾಸಕ ಡಿಕೆಶಿಗೆ ಇಡಿ ವಿಚಾರಣೆ ಕಂಟಕ: ಬಂಧನ ಭೀತಿಯಲ್ಲಿ ಮಾಜಿ ಸಚಿವ

Webdunia
ಶುಕ್ರವಾರ, 30 ಆಗಸ್ಟ್ 2019 (10:16 IST)
ಬೆಂಗಳೂರು: ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.


ಇಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆಶಿ ಜತೆಗೆ ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಅವರ ಅರ್ಜಿಗಳನ್ನೂ ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇವರೂ ವಿಚಾರಣೆಗೆ ಹಾಜರಾಗಬೇಕಾಗುತ್ತದೆ. 2017 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಡಿಕೆ ಶಿವಕುಮಾರ್ ಗೆ ಸೇರಿದ್ದು ಎನ್ನಲಾದ ಮನೆಯಲ್ಲಿ 8.50 ಕೋಟಿ ರೂ.ಗೂ ಅಧಿಕ ಲೆಕ್ಕವಿಲ್ಲದ ಹಣ ಪತ್ತೆಯಾಗಿತ್ತು. ಈ ಪ್ರಕರಣ ಡಿಕೆಶಿಗೆ ಉರುಳಾಗಿ ಪರಿಣಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments