ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 22 ಜುಲೈ 2025 (10:47 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಇಂದಿನಿಂದ ಮೂರು ದಿನಗಳ ಕಾಲ ಯಾರ ಕೈಗೂ ಸಿಗಲ್ಲ ಎಂದಿದ್ದಾರೆ. ಮೂರು ದಿನ ವಿಶ್ರಾಂತಿ ಪಡೆಯಲಿದ್ದೇನೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಗೆ ಇತ್ತೀಚೆಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿತ್ತು. ಇದಾದ ಬಳಿಕ ಅವರು ಕೇವಲ ಒಂದು ದಿನ ವಿಶ್ರಾಂತಿ ಪಡೆದಿದ್ದರು. ಅದಾದ ಬಳಿಕ ಬಿಡುವಿಲ್ಲದ ಕಾರ್ಯಕ್ರಮಗಳಿಂದಾಗಿ ಅವರಿಗೆ ವಿಶ್ರಾಂತಿಯೇ ಪಡೆಯಲು ಸಾಧ್ಯವಾಗಿರಲಿಲ್ಲ. ಸಿಎಂ ಸಿದ್ದರಾಮಯ್ಯ ಸಾಧನಾ ಸಮಾವೇಶಕ್ಕೂ ಅನಾರೋಗ್ಯದ ನಡುವೆಯೂ ಆಗಮಿಸಿದ್ದರು. ಅದಾದ ಬಳಿಕ ದೆಹಲಿಗೆ ತೆರಳಿದ್ದರು.

ಆದರೆ ಈಗ ಡಿಕೆ ಶಿವಕುಮಾರ್ ತೀರಾ ಸುಸ್ತಾದವರಂತೆ ಕಾಣುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇನ್ನು ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯುವುದಾಗಿ ಹೇಳಿದ್ದಾರೆ. ಹೀಗಾಗಿ ಇಂದಿನಿಂದ ಮೂರು ದಿನ ಅವರು ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಜನರನ್ನು ಅನಿವಾರ್ಯ ಕಾರಣಗಳಿಂದ ಭೇಟಿ ಮಾಡಲಾಗುತ್ತಿಲ್ಲ. ಯಾರನ್ನೂ ಭೇಟಿ ಮಾಡಲು ಆಗಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments