Webdunia - Bharat's app for daily news and videos

Install App

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

Krishnaveni K
ಶುಕ್ರವಾರ, 25 ಜುಲೈ 2025 (10:21 IST)
ಬೆಂಗಳೂರು: ರಾಹುಲ್ ಗಾಂಧಿ ಹೇಳಿದ್ದು ಕರೆಕ್ಟ್, ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್ ಗೆ ನೆಟ್ಟಿಗರು ಟಾಂಗ್ ಕೊಟ್ಟಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಸ್ಪರ್ಧಿಸಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಖ್ಯಾತ ಹೃದ್ರೋಗ ತಜ್ಞ, ಬಡವರ ಬಂಧು ಎಂದೇ ಕರೆಯಿಸಿಕೊಂಡಿದ್ದ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸಿದ್ದರು.

ಡಿಕೆ ಸುರೇಶ್ ಆಗಲೇ ಎರಡು ಬಾರಿ ಇದೇ ಕ್ಷೇತ್ರದಿಂದ ಗೆದ್ದಿದ್ದರು. ಹೀಗಾಗಿ ಕಾಂಗ್ರೆಸ್ ಗೆ ಈ ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ ಸಿಎನ್ ಮಂಜುನಾಥ್ ರಾಜಕೀಯದ ಹೊರತಾಗಿಯೂ ತಮ್ಮ ವೃತ್ತಿಯಿಂದ ಜನರ ಪ್ರೀತಿ ಗಳಿಸಿದ್ದರು. ಕೊನೆಗೆ ಮಂಜುನಾಥ್ ಅವರೇ ಗೆಲುವು ಸಾಧಿಸಿದ್ದರು. ಇದು ಡಿಕೆಶಿಗೆ ಪ್ರತಿಷ್ಠೆಯ ಕಣವಾಗಿತ್ತು. ಸಹೋದರನ ಸೋಲು ಡಿಕೆಶಿಗೆ ಹಿನ್ನಡೆ ತಂದಿತ್ತು.

ಇದೀಗ ರಾಹುಲ್ ಗಾಂಧಿ ಸಂಸತ್ ಭವನದ ಮುಂದೆ ಮಾತನಾಡುವಾಗ ಕರ್ನಾಟಕದಲ್ಲೂ ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಅಕ್ರಮ ನಡೆದಿತ್ತು ಎಂದಿದ್ದರು. ಅವರ ಹೇಳಿಕೆ ಸಮರ್ಥಿಸಿದ್ದ ಡಿಕೆಶಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಕ್ರಮವಾಗಿದೆ ಎಂದಿದ್ದಾರೆ.

ಇದಕ್ಕೆ ನೆಟ್ಟಿಗರು ಭಾರೀ ಟ್ರೋಲ್ ಮಾಡಿದ್ದಾರೆ. ಹಾಗಿದ್ದರೆ ಕಳೆದ ಎರಡೂವರೆ ವರ್ಷಗಳಿಂದ ನೀವೇನು ನಿದ್ರೆ ಮಾಡ್ತಿದ್ರಾ? ಡಾ ಸಿಎನ್ ಮಂಜುನಾಥ್ ರಂತಹ ಸಾಧ್ವಿ, ಮೇರು ವ್ಯಕ್ತಿತ್ವದ ವ್ಯಕ್ತಿ ಮೊದಲ ಬಾರಿಗೆ ರಾಜಕೀಯಕ್ಕೆ ಕಾಲಿಟ್ಟವರು ಚೀಟಿಂಗ್ ಮಾಡಿ ಗೆದ್ದರು ಎಂದರೆ ಅದನ್ನು ನಂಬಕ್ಕಾಗುತ್ತಾ? ಬೇರೆ ಯಾವ ಕ್ಷೇತ್ರದ ಬಗ್ಗೆ  ಹೇಳಿದ್ರೂ ನಂಬ್ತಿದ್ದೆವು. ಆದರೆ ಸಿಎನ್ ಮಂಜುನಾಥ್ ಬಗ್ಗೆ ಹಾಗೆ ಹೇಳಿದರೆ ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ಹಾಗಿದ್ದರೆ 2023 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲವೂ ಸರಿಯಿತ್ತಾ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments