Webdunia - Bharat's app for daily news and videos

Install App

ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನವೂ ಬದಲಾಗುತ್ತದೆ ನೋಡ್ತಿರಿ ಎಂದ ಡಿಕೆಶಿ ವಿಡಿಯೋ: ಬಿಜೆಪಿ ಆಕ್ರೋಶ

Krishnaveni K
ಸೋಮವಾರ, 24 ಮಾರ್ಚ್ 2025 (14:07 IST)
ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸಂವಿಧಾನವೂ ಬದಲಾಗುತ್ತದೆ ಎಂಬ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಆಂಗ್ಲ ವಾಹಿನಿಯೊಂದಕ್ಕೆ ನೀಡಿದ ಸಂವಾದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಮುಸ್ಲಿಮರಿಗೆ ಕರ್ನಾಟಕದಲ್ಲಿ ಮೀಸಲಾತಿ ನೀಡಿರುವ ವಿಚಾರದ ಬಗ್ಗೆ ಮಾತನಾಡುತ್ತಾರೆ. ನಿರೂಪಕರು, ಈಗ ಇರುವ ಟೀಕೆ ಏನೆಂದರೆ ನೀವು ಧರ್ಮ ಆಧಾರಿತವಾಗಿ ಮೀಸಲಾತಿ ನೀಡಿರುವುದು. ಧರ್ಮ ಆಧಾರಿತವಾಗಿ ಮೀಸಲಾತಿ ನೀಡುವುದು ಸಂವಿಧಾನದಲ್ಲಿ ಇಲ್ಲ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸುವ ಡಿಕೆ ಶಿವಕುಮಾರ್ ‘ಎಲ್ಲವೂ ಬದಲಾಗುತ್ತದೆ ನೋಡ್ತಿರಿ. ಸಂವಿಧಾನವೂ ಬದಲಾಗುತ್ತದೆ. ಈಗ ಎಷ್ಟೋ ಜನ ಕೋರ್ಟ್ ಗೆ ಹೋಗ್ತಾರೆ. ಈ ವಿಚಾರದ ಬಗ್ಗೆ ಕೋರ್ಟ್ ತೀರ್ಪು ನೀಡುತ್ತದೆ. ಮುಂದೆ ಸಂವಿಧಾನವೂ ಅದಕ್ಕೆ ತಕ್ಕಂತೆ ಬದಲಾಗುತ್ತದೆ’ ಎಂದಿದ್ದಾರೆ.

ಅವರ ಈ ಹೇಳಿಕೆ ಬಗ್ಗೆ ಬಿಜೆಪಿ ತೀವ್ರ ಟೀಕೆ ಮಾಡಿದೆ. ತನ್ನ ಸೋಷಿಯಲ್ ಮೀಡಿಯಾದಲ್ಲಿ ಡಿಕೆಶಿ ಹೇಳಿಕೆಯ ವಿಡಿಯೋ ಪ್ರಕಟಿಸಿರುವ ಬಿಜೆಪಿ, ಇವರ ಮುಸ್ಲಿಂ ಓಲೈಕೆ ಎಲ್ಲಿಯವರೆಗೆ ತಲುಪಿದೆ ನೋಡಿ ಎಂದಿದೆ. ಅಷ್ಟೇ ಅಲ್ಲ, ಇಂದು ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments