Webdunia - Bharat's app for daily news and videos

Install App

ಬಿಜೆಪಿಯವರ ಹಗರಣದ ಲಿಸ್ಟ್ ಹೊರಗೆಳಿತೀನಿ ಹುಷಾರ್ ಎಂದ ಡಿಕೆ ಶಿವಕುಮಾರ್

Krishnaveni K
ಗುರುವಾರ, 25 ಜುಲೈ 2024 (12:25 IST)
ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿಯವರ ಹಗರಣದ ಲಿಸ್ಟ್ ಹೊರಗೆಳೀತಿವಿ ಹುಷಾರ್ ಎಂದಿದ್ದಾರೆ.

ಮುಡಾ ಹಗರಣದ ಬಗ್ಗೆ ಸದನದಲ್ಲಿ  ಚರ್ಚೆಯಾದಾಗ ಮೊದಲು ಅವರು ಮಾತನಾಡಿದರು. ನಾವು ಮಾತನಾಡುವಾಗ ಕೇಳಿಸಿಕೊಳ್ಳಲಿಲ್ಲ. ಯಾವಾಗ ನಾವು ಅವರ ಕಾಲದ ಹಗರಣದ ಬಗ್ಗೆ ಪಟ್ಟಿ ತೆಗೆದ್ವೋ ಆಗ ಈ ರೀತಿ ಪ್ರತಿಭಟನೆಯ ನಾಟಕವಾಡ್ತಿದ್ದಾರೆ ಎಂದು ಇಂದು ಸದನ ಆರಂಭಕ್ಕೆ ಮುನ್ನ ಮಾಧ್ಯಮಗಳಿಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಮ್ಮದು ಹಗರಣ ಆಗಿಲ್ಲ ಅಂತ ಹೇಳಲ್ಲ. ಯಾರೋ ಒಬ್ಬ ಅಧಿಕಾರಿಯಿಂದ 80 ಕೋಟಿ ಅವ್ಯವಹಾರ ಆಗಿದೆ. ಉಪ್ಪು ತಿಂದವ ನೀರು ಕುಡಿಯುತ್ತಾನೆ. ತಪ್ಪಿತಸ್ಥ ಅಧಿಕಾರಿಗೆ ಶಿಕ್ಷೆಯಾಗುತ್ತದೆ. ಆದರೆ ಅವರ ಕಾಲದಲ್ಲಿ ಕೋಟಿಗಟ್ಟಲೆ ಅವ್ಯವಹಾರ ಆಗಿಲ್ವಾ? ಅವರದ್ದು ತೆಗೆತೀವಿ ಎಂದಿದ್ದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ.

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಲ್ಲರೂ ಅಕ್ರಮವಾಗಿ ಸೈಟು ಹಂಚಿಕೊಂಡಿದ್ದಾರೆ. ಇದರ ಲೆಕ್ಕ ತೆಗಿತೀವಿ ನೋಡ್ತಾ ಇರಿ ಎಂದು ಎಚ್ಚರಿಕೆ ನೀಡಿ ಸದನ ಕಲಾಪಕ್ಕೆ ತೆರಳಿದ್ದಾರೆ. ಬಳಿಕ ಸದನದಲ್ಲೂ ಡಿಕೆಶಿ ಪ್ರತಿಪಕ್ಷಗಳನ್ನು ಸೈಲೆಂಟ್ ಆಗಿಸಿದ್ದಾರೆ. ಸ್ಪೀಕರ್ ಆಸನದ ಮುಂಭಾಗ ನಿಂತು ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಿದ್ದ ಪ್ರತಿಪಕ್ಷ ಶಾಸಕರನ್ನು ಸುಮ್ಮನಿರುವಂತೆ ಕೈ ಸನ್ನೆ ಮೂಲಕವೇ ಸೈಲೆಂಟಾಗಿಸಲು ಪ್ರಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments