Webdunia - Bharat's app for daily news and videos

Install App

ಶ್ರೀರಾಮುಲು ಮೇಲೆ ಹರಿಹಾಯ್ದ ಡಿ.ಕೆ.ಶಿವಕುಮಾರ್

Webdunia
ಗುರುವಾರ, 18 ಅಕ್ಟೋಬರ್ 2018 (15:45 IST)
ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಅಂತ ಸಚಿವ ಡಿ.ಕೆ.ಶಿವಕುಮಾರ್ ಅವರು ಬಿ.ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.

ಅಕ್ಕಾವ್ರನ್ನ ಪಾರ್ಲಿಮೆಂಟ್ ಗೆ ಕಳಿಸಲಿ. ನನ್ನನ್ನು ಜೈಲಿಗೆ ಕಳಿಸಲಿ. ಬಿ.ಎಸ್.ಯಡಿಯೂರಪ್ಪನವರು ಇದಕ್ಕೆ ಉತ್ತರ ಕೊಡಬೇಕು. ಶ್ರೀರಾಮುಲು ಜಡ್ಜ್ ಆಗಿ ಅಪಾಯಿಂಟ್ ಆಗಿದ್ದಾರೆ. ಜೈಲಿಗೆ ಕಳಿಸೋದು ಯಾರು ಜಡ್ಜ್ ಅಲ್ವಾ? ಹಂಗಾದ್ರೆ ಕೇಂದ್ರ ಸರ್ಕಾರ ಸಂಪೂರ್ಣವಾಗಿ ಅವರ ಕೈಯಲ್ಲಿದೆ ಅಂದ ಹಾಗಾಯ್ತಲ್ಲ? ನನ್ನ ಜೈಲಿಗೆ ಕಳಿಸೋ ವಿಚಾರ ಮಾತಾಡ್ತಾರೆ ಅಂತಾದ್ರೆ ಅವರಿಗೆ ಆ ಅಧಿಕಾರ ಸಿಕ್ಕಿರಬೇಕಲ್ಲ ಎಂದು ಡಿ.ಕೆ.ಶಿವಕುಮಾರ್ ಅವರು ಬಿ.ಶ್ರೀರಾಮುಲು ವಿರುದ್ಧ ಟೀಕೆ ಮಾಡಿದರು.

ಶ್ರೀರಾಮುಲು ಅವರು ಸಂಸದ, ಶಾಸಕರಾಗಿದ್ದವರು. ಅವರು ಈ ಬಗ್ಗೆ ಮಾತಾಡಬೇಕಾದ್ರೆ ಬಹುಶಃ ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೀತಾ ಇದೆ ಎಂದರು. ಈ ಹಿಂದೆ 10 ವರ್ಷ ಅಣ್ಣ ಅಕ್ಕ ಇಬ್ರೂ ಪಾರ್ಲಿಮೆಂಟ್ ಸದಸ್ಯರಾಗಿದ್ರು. ಆಗ ಅವರು ದೇಶದ ಒಳಿತಿಗೆ ಎಷ್ಟು ಪ್ರಶ್ನೆ ಕೇಳಿದ್ದಾರೆ? ಅದರ ಕುರಿತು ಒಂದು ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಶ್ರೀರಾಮುಲು ಅಣ್ಣಾವ್ರಿಗೆ ವಿಶ್ವಾಸ ಇದ್ದಿದ್ರೆ, ಜನರಿಗೆ ಕೊಡುಗೆ ಕೊಟ್ಟಿದ್ದೀನಿ ಅಂತಿದ್ರೆ ಅವರು ಬಳ್ಳಾರಿ ಗ್ರಾಮೀಣದಲ್ಲೇ ಸ್ಫರ್ಧಿಸಬೇಕಿತ್ತು ಎಂದು ಗದಗನ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಚಿವ ಡಿ. ಕೆ. ಶಿವಕುಮಾರ್ ಭರ್ಜರಿ ಟಾಂಗ್ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments