ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟುಕೊಟ್ಟಿಲ್ಲ ಅಂದ್ರೆ ಡಿಕೆ ಶಿವಕುಮಾರ್ ಒದ್ದು ಕಿತ್ಕೋತಾರೆ

Krishnaveni K
ಭಾನುವಾರ, 2 ಫೆಬ್ರವರಿ 2025 (13:20 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಒಳಗೊಳಗೇ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟುಕೊಡದೇ ಇದ್ದರೆ ಡಿಕೆ ಶಿವಕುಮಾರ್ ಒದ್ದು ತೆಗೆದುಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಲೇವಡಿ ಮಾಡಿದ್ದಾರೆ.

ಈ ಹಿಂದೆ ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ತಮ್ಮನ್ನು ಮಂತ್ರಿ ಮಂಡಲದಿಂದ ಕೈ ಬಿಟ್ಟಿದ್ದಕ್ಕೆ ಬಾಗಿಲಿಗೆ ಒದ್ದು ಮಂತ್ರಿ ಪದವಿ ಪಡೆದಿದ್ದಾಗಿ ಡಿಕೆ ಶಿವಕುಮಾರ್ ಸದನದಲ್ಲಿ ಹೇಳಿಕೆ ನೀಡಿದ್ದರು. ಅದನ್ನೇ ಇಟ್ಟುಕೊಂಡು ಅಶೋಕ್ ಈಗ ಟಾಂಗ್ ಕೊಟ್ಟಿದ್ದಾರೆ.

ಇದಕ್ಕೆ ಮೊದಲು ಹೇಳಿಕೆ ನೀಡಿದ್ದ ಅವರು ನವಂಬರ್ 16,17 ಕ್ಕೆ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದಿದ್ದರು. ಇದರ ಜೊತೆಗೆ ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಪದವಿಗಾಗಿ ನಡೆಯುತ್ತಿರುವ ಒಳಜಗಳದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ನವಂಬರ್ ವರೆಗೆ ಮ್ಯೂಸಿಕಲ್ ಚೇರ್ ನ ವಿಷಲ್ ಬರುತ್ತದೆ. ಸಿಎಂ ಕುರ್ಚಿ ಬಿಟ್ಟುಕೊಟ್ಟಿಲ್ಲ ಎಂದರೆ ಡಿಕೆ ಶಿವಕುಮಾರ್ ಒದ್ದು ಕಿತ್ಕೋತಾರೆ ಅಂತಾನೇ ಹೇಳಿದ್ದಾರೆ. ನಮ್ಗೂ ಗೊತ್ತಿದೆ, ನಿಖರವಾಗಿ ಹೇಳುತ್ತಾ ಇದ್ದೇನೆ. ಸಿಎಂ ಬದಲಾವಣೆಯಾಗೋದು ಪಕ್ಕಾ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments