Webdunia - Bharat's app for daily news and videos

Install App

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

Sampriya
ಭಾನುವಾರ, 30 ನವೆಂಬರ್ 2025 (16:50 IST)
ಬೆಂಗಳೂರು: ಬಹಳ ದೊಡ್ಡವರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರು ಯಾರಾ ಬೆಂಬಲವನ್ನು ಪಡೆಯುವುದಿಲ್ಲ. ಅವರು  ಒಕ್ಕಲಿಗರ ಮಠ, ಒಕ್ಕಲಿಗರ ಸಂಘ, ಒಕ್ಕಲಿಗ ಜಾತಿಯನ್ನು ಎಂದೂ ಉಪಯೋಗಿಸಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ. 

ಮಾಧ್ಯಮಗಳು ನಿಮ್ಮ ಪರವಾಗಿ ಸ್ವಾಮೀಜಿಗಳು ಧ್ವನಿ ಎತ್ತಿರುವುದಕ್ಕೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಲ್ಲ ಎಂಬ  ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಕ್ಕಲಿಗ ಮಠದ ಹಿರಿಯ ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗುತ್ತಿದ್ದರೆ ಎಂದು ಪ್ರಶ್ನೆ ಹಾಕಿದ್ದಾರೆ. 

ಪಾಪ, ಕುಮಾರಣ್ಣನಿಗೆ ಒಕ್ಕಲಿಗರ ಎರಡನೇ ಮಠ ಹೇಗಾಯಿತು ಎಂಬುದು ಗೊತ್ತಿಲ್ಲವೇ? ಅದನ್ನು ಕಟ್ಟಿದವರು ಯಾರು?ದೇವೇಗೌಡರ ಪರ ಸ್ವಾಮೀಜಿಗಳು ರಸ್ತೆಗೆ ಇಳಿಯಲಿಲ್ಲವೇ? ಸದಾನಂದ ಗೌಡರಿಗೆ ತೊಂದರೆ ಆದಾಗ ಸ್ವಾಮೀಜಿಗಳು ಸುಮ್ಮನೆ ಕೂತಿದ್ದರಾ? ಕೆಲವು ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ? ಬೇರೆ ಸಂದರ್ಭದಲ್ಲಿ ಸ್ವಾಮೀಜಿಗಳು ಮಾತನಾಡಿದಾಗ ನಾನು ಬೇಸರ ಮಾಡಿಕೊಂಡಿದ್ದೇನಾ ಎಂದು ಮರು ಪ್ರಶ್ನೆ ಮಾಡಿದರು. 

ಈ ಸಂದರ್ಭದಲ್ಲಿ ನಾನು ಸ್ವಾಮೀಜಿಗಳ ಬೆಂಬಲವನ್ನು ಕೋರಲಿಲ್ಲ. ಅವರೇ ನನ್ನ ಮೇಲಿನ ಪ್ರೀತಿತಿಂದ ಮಾತನಾಡಿದ್ದಾರೆ ಎಂದರು. 

ಒಂದು ಸಮುದಾಯದಲ್ಲಿ ಹುಟ್ಟಿರುವ ನಾನು ಎಲ್ಲ ಸಮುದಾಯಗಳನ್ನು ಪ್ರೀತಿ, ಗೌರವದಿಂದ ಕಾಣುತ್ತೇನೆ. ಬಾಳೆಹೊನ್ನೂರು ಸ್ವಾಮಿಜಿ, ಶ್ರೀಶೈಲ ಸ್ವಾಮೀಜಿ ಸೇರಿದಂತೆ ಸಾಕಷ್ಟು ಸ್ವಾಮೀಜಿಗಳು ನನ್ನ ಪರ ಮಾತನಾಡಿದ್ದಾರೆ. ನನ್ನ ಮೇಲೆ ಅವರಿಗೆ ಪ್ರೀತಿ, ವಿಶ್ವಾಸ ಇದೆ. ಹೀಗಾಗಿ ಮಾತನಾಡಿದ್ದಾರೆ. ಇನ್ನೂ ಜೈನ ಸ್ವಾಮೀಜಿಗಳು ಕೂಡ ದೊಡ್ಡ ಸಮಾವೇಶದಲ್ಲಿ ಬಹಿರಂಗವಾಗಿ ಆಶೀರ್ವಾದ ಮಾಡಿದರು ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments