Webdunia - Bharat's app for daily news and videos

Install App

ಕಾಪು ಮಾರಿಯಮ್ಮಗೆ ವಿಶೇಷ ನಂಬರ್‌ನ ಸಂಖ್ಯೆಯಲ್ಲಿ ದೇಣಿಗೆ ನೀಡಿದ ಡಿಕೆ ಶಿವಕುಮಾರ್‌

Sampriya
ಭಾನುವಾರ, 2 ಮಾರ್ಚ್ 2025 (16:58 IST)
Photo Courtesy X
ಉಡುಪಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಈ ವೇಳೆ ತಮ್ಮ ಪತ್ನಿ ಹೆಸರಿನಲ್ಲಿ ದೇವಸ್ಥಾನಕ್ಕೆ ₹9,99,999 ದೇಣಿಗೆ ನೀಡಿದರು.

ನಂತರ ಮಾತನಾಡಿದ ಅವರು, ದೇವರು ವರ-ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡ್ತಾನೆ. ಮಾತೃಭೂಮಿ, ಭೂತಾಯಿ, ದೇವಿ ದರ್ಶನ ಮಾಡುವ ಅವಕಾಶ ಸಿಕ್ಕಿದೆ ಎಂದರು.

ಯಾವ ಧರ್ಮದಲ್ಲೂ ಯಾರಿಗೂ ತೊಂದರೆ ಕೊಡಬೇಕೆಂದು ಇಲ್ಲ. ನಮ್ಮ ಧರ್ಮವನ್ನ ನಾವು ಕಾಪಾಡಬೇಕು. ಈ ದೇವಿ ಹೂವಿನಹಾರವನ್ನೂ ತೆಗೆದುಕೊಳ್ಳುತ್ತದೆ, ಹಣ್ಣೂ ತೆಗೆದುಕೊಳ್ಳುತ್ತದೆ, ಕೋಳಿ ಹಾಗೂ ಕುರಿಯನ್ನೂ ತೆಗೆದುಕೊಳ್ಳುತ್ತದೆ ಎಂದು ಇಲ್ಲಿನ ದೇವಸ್ಥಾನದ ವ್ಯವಸ್ಥಾಪಕರು ತಿಳಿಸಿದ್ದಾರೆ. ಇಲ್ಲಿ ದೇವಸ್ಥಾನದ ಕೆತ್ತನೆ ಮಾಡಿರುವವರಿಗೆ ಹಾಗೂ ದೇಗುಲಕ್ಕೆ ದಾನ ಮಾಡಿರುವವರಿಗೆ ಈ ದೇವಿ ಅನುಗ್ರಹಿಸುತ್ತಾರೆ ಎಂಬ ಸಂಪೂರ್ಣವಾದ ನಂಬಿಕೆ ನನಗೆ ಕಾಣಿಸುತ್ತಿದೆ ಎಂದು ಹೇಳಿದರು.

ಭಕ್ತಿ ಇಲ್ಲದೆ ಯಾವ ಮನುಷ್ಯನೂ ಬದುಕಲು ಸಾಧ್ಯವಿಲ್ಲ. ಲಕ್ಷಾಂತರ ಜನ ಭಕ್ತರು ಈ ದೇವಾಲಯಕ್ಕೆ ಬಂದು ದೇವಿಯ ಅನುಗ್ರಹ ಪಡೆಯುತ್ತಾರೆ ಎಂಬುದನ್ನ ನಾನು ತಿಳಿದಿದ್ದೇನೆ. ಎಲ್ಲಾ ಕಾರ್ಯಕ್ರಮ ಮುಗಿದ ಮೇಲೆ ಮತ್ತೆ ಕ್ಷೇತ್ರಕ್ಕೆ ಫ್ಯಾಮಿಲಿ ಜೊತೆ ಬರುತ್ತೇನೆ ಎಂದು ಡಿಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments