Webdunia - Bharat's app for daily news and videos

Install App

ಕಾಪು ಮಾರಿಯಮ್ಮಗೆ ವಿಶೇಷ ನಂಬರ್‌ನ ಸಂಖ್ಯೆಯಲ್ಲಿ ದೇಣಿಗೆ ನೀಡಿದ ಡಿಕೆ ಶಿವಕುಮಾರ್‌

Sampriya
ಭಾನುವಾರ, 2 ಮಾರ್ಚ್ 2025 (16:58 IST)
Photo Courtesy X
ಉಡುಪಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ಈ ವೇಳೆ ತಮ್ಮ ಪತ್ನಿ ಹೆಸರಿನಲ್ಲಿ ದೇವಸ್ಥಾನಕ್ಕೆ ₹9,99,999 ದೇಣಿಗೆ ನೀಡಿದರು.

ನಂತರ ಮಾತನಾಡಿದ ಅವರು, ದೇವರು ವರ-ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡ್ತಾನೆ. ಮಾತೃಭೂಮಿ, ಭೂತಾಯಿ, ದೇವಿ ದರ್ಶನ ಮಾಡುವ ಅವಕಾಶ ಸಿಕ್ಕಿದೆ ಎಂದರು.

ಯಾವ ಧರ್ಮದಲ್ಲೂ ಯಾರಿಗೂ ತೊಂದರೆ ಕೊಡಬೇಕೆಂದು ಇಲ್ಲ. ನಮ್ಮ ಧರ್ಮವನ್ನ ನಾವು ಕಾಪಾಡಬೇಕು. ಈ ದೇವಿ ಹೂವಿನಹಾರವನ್ನೂ ತೆಗೆದುಕೊಳ್ಳುತ್ತದೆ, ಹಣ್ಣೂ ತೆಗೆದುಕೊಳ್ಳುತ್ತದೆ, ಕೋಳಿ ಹಾಗೂ ಕುರಿಯನ್ನೂ ತೆಗೆದುಕೊಳ್ಳುತ್ತದೆ ಎಂದು ಇಲ್ಲಿನ ದೇವಸ್ಥಾನದ ವ್ಯವಸ್ಥಾಪಕರು ತಿಳಿಸಿದ್ದಾರೆ. ಇಲ್ಲಿ ದೇವಸ್ಥಾನದ ಕೆತ್ತನೆ ಮಾಡಿರುವವರಿಗೆ ಹಾಗೂ ದೇಗುಲಕ್ಕೆ ದಾನ ಮಾಡಿರುವವರಿಗೆ ಈ ದೇವಿ ಅನುಗ್ರಹಿಸುತ್ತಾರೆ ಎಂಬ ಸಂಪೂರ್ಣವಾದ ನಂಬಿಕೆ ನನಗೆ ಕಾಣಿಸುತ್ತಿದೆ ಎಂದು ಹೇಳಿದರು.

ಭಕ್ತಿ ಇಲ್ಲದೆ ಯಾವ ಮನುಷ್ಯನೂ ಬದುಕಲು ಸಾಧ್ಯವಿಲ್ಲ. ಲಕ್ಷಾಂತರ ಜನ ಭಕ್ತರು ಈ ದೇವಾಲಯಕ್ಕೆ ಬಂದು ದೇವಿಯ ಅನುಗ್ರಹ ಪಡೆಯುತ್ತಾರೆ ಎಂಬುದನ್ನ ನಾನು ತಿಳಿದಿದ್ದೇನೆ. ಎಲ್ಲಾ ಕಾರ್ಯಕ್ರಮ ಮುಗಿದ ಮೇಲೆ ಮತ್ತೆ ಕ್ಷೇತ್ರಕ್ಕೆ ಫ್ಯಾಮಿಲಿ ಜೊತೆ ಬರುತ್ತೇನೆ ಎಂದು ಡಿಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments