Webdunia - Bharat's app for daily news and videos

Install App

ರಾಜ್ಯದಲ್ಲಿ ನಡೆಯುವ ಚುನಾವಣೆ ಎದುರಿಸಲು ಸಿದ್ದ- ಡಿಕೆ ಶಿವಕುಮಾರ್

Webdunia
ಮಂಗಳವಾರ, 29 ಮಾರ್ಚ್ 2022 (19:06 IST)
ರಾಜ್ಯದಲ್ಲಿ ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ನಡೆದರೆ ಮತದಾರರನ್ನು ಎದುರಿಸಲು ತಮ್ಮ ಪಕ್ಷ ಸಿದ್ಧವಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ನವೆಂಬರ್ 27 ರಂದು ಚುನಾವಣೆ ಘೋಷಣೆ ಮಾಡಬಹುದು ಎಂದು ಸಂಭವನೀಯ ದಿನಾಂಕವನ್ನೂ ಉಲ್ಲೇಖಿಸಿದ್ದಾರೆ.
 ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ವಾರದ ಕೊನೆಯಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ತಯಾರಿ ಮತ್ತು ಪದಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
 
ರಾಜ್ಯದಲ್ಲಿ ಅವಧಿಗೂ ಮುನ್ನ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಅವರು(ಚುನಾವಣಾ ಆಯೋಗ) ಬಯಸಿದಾಗ ಅದನ್ನು(ಚುನಾವಣೆ ಘೋಷಿಸಲಿ) ಮಾಡಲಿ... ನಾಳೆಯೇ, ಈ ತಿಂಗಳು, ನವೆಂಬರ್ 27 ಅಥವಾ ಮುಂದಿನ ಮಾರ್ಚ್ ನಲ್ಲಿ ಚುನಾವಣೆ ಘೋಷಿಸಲಿ. ಕಾಂಗ್ರೆಸ್ ಚುನಾವಣೆ ಎದುರಿಸಲು ಸಿದ್ಧವಾಗಿದೆ ಎಂದಿದ್ದಾರೆ.
 
ನವೆಂಬರ್ 27 ಅನ್ನು ಚುನಾವಣೆ ಘೋಷಣೆಯ ದಿನಾಂಕ ಎಂದು ನಿರ್ದಿಷ್ಟವಾಗಿ ಉಲ್ಲೇಖಿಸಿರುವ ಬಗ್ಗೆ ಕೇಳಿದಾಗ, "ನೀವು(ವರದಿಗಾರರು) ಮಾಹಿತಿ ಪಡೆಯುವಂತೆಯೇ ನಮಗೂ ಕೆಲವು ಮಾಹಿತಿಗಳು ಸಿಗುತ್ತವೆ" ಎಂದು ಶಿವಕುಮಾರ್ ಹೇಳಿದರು.
 
ರಾಹುಲ್ ಗಾಂಧಿ ಅವರ ರಾಜ್ಯ ಪ್ರವಾಸದ ವಿವರಗಳನ್ನು ಹಂಚಿಕೊಂಡ ಶಿವಕುಮಾರ್ ಅವರು, ಮಾರ್ಚ್ 31 ರಂದು ಕರ್ನಾಟಕಕ್ಕೆ ಬರುತ್ತಿದ್ದು, ತುಮಕೂರು ಜಿಲ್ಲೆಯ ಪ್ರಮುಖ ಲಿಂಗಾಯತ ಮಠವಾದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮ ವಾರ್ಷಿಕೋತ್ಸವದಂದು ಅವರ ಗದ್ದುಗೆಗೆ ನಮನ ಸಲ್ಲಿಸಲಿದ್ದಾರೆ ಎಂದರು.
 
ಅಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸುವ ರಾಹುಲ್ ಗಾಂಧಿ, ನೇರವಾಗಿ ಮಠಕ್ಕೆ ಭೇಟಿ ನೀಡಿ ನಗರಕ್ಕೆ ವಾಪಸಾಗಲಿದ್ದಾರೆ. ಬಳಿಕ ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೆ ಶಾಸಕರು, ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು ಮತ್ತು ಪದಾಧಿಕಾರಿಗಳನ್ನು ಒಳಗೊಂಡಂತೆ ರಾಜ್ಯ ಕಾಂಗ್ರೆಸ್‌ನ ವಿಸ್ತೃತ ಕಾರ್ಯಕಾರಿ ಸಮಿತಿಯನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments