Webdunia - Bharat's app for daily news and videos

Install App

ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿಕೆ ಸುರೇಶ್ ಆಸ್ತಿ ವಿವರ ಹೀಗಿದೆ

Krishnaveni K
ಶುಕ್ರವಾರ, 29 ಮಾರ್ಚ್ 2024 (11:10 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಲಿ ಸಂಸದ ಡಿಕೆ ಸುರೇಶ್ ತಮ್ಮ ಆಸ್ತಿ ವಿವರ ನೀಡಿದ್ದಾರೆ.

ನಿನ್ನೆ ಕಾಂಗ್ರೆಸ್ ನಾಯಕರ ಜೊತೆ ರೋಡ್ ಶೋ ನಡೆಸಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳು ತಮ್ಮ ಸ್ಥಿರ ಮತ್ತು ಚರಾಸ್ತಿಗಳ ವಿವರ ಸಲ್ಲಿಕೆ ಮಾಡಬೇಕಾಗುತ್ತದೆ. ಅದರಂತೆ ಡಿಕೆ ಸುರೇಶ್ ಕೂಡಾ ಆಸ್ತಿ ವಿವರ ನೀಡಿದ್ದಾರೆ.

ಅದರಂತೆ ಡಿಕೆ ಸುರೇಶ್ ಒಟ್ಟು ಆಸ್ತಿ ಮೌಲ್ಯ 593.04 ಕೋಟಿ ರೂ. ಎಂದು ತಿಳಿದುಬಂದಿದೆ. ಅಫಿಡವಿಟ್ ನಲ್ಲಿ ಕೃಷಿಕ, ಉದ್ಯಮಿ ಎಂದು ವಿವರ ನೀಡಿದ್ದಾರೆ. ಡಿಕೆ ಸುರೇಶ್ ಕೈಯಲ್ಲಿ 4.77 ಲಕ್ಷ ರೂ. ನಗದು, 106.71 ಕೋಟಿ ಚರಾಸ್ತಿ, 486.33 ಕೋಟಿ ರೂ. ಸ್ಥಿರಾಸ್ತಿಯಿದೆ ಎಂದು ಘೋಷಿಸಿದ್ದಾರೆ. ಅಣ್ಣ ಡಿಕೆ ಶಿವಕುಮಾರ್ ಗೆ 30.08 ಕೋಟಿ ರೂ. ಹಣ ಸಾಲ ನೀಡಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾಗೆ 7.94 ಕೋಟಿ ರೂ., ಡಿಕೆಶಿ ಪುತ್ರ ಆಕಾಶ್ ಗೆ 1.06 ಕೋಟಿ ರೂ., ತಾಯಿ ಗೌರಮ್ಮಗೆ 4.75 ಕೋಟಿ ರೂ. ಕುಣಿಗಲ್ ಶಾಸಕ ರಂಗನಾಥ್ ಪತ್ನಿ ಡಾ. ಸುಮಾಗೆ 30 ಲಕ್ಷ ರೂ. ಸಾಲ ನೀಡಿರುವುದಾಗಿ ವಿವರ ನೀಡಿದ್ದಾರೆ.

8 ತಿಂಗಳಲ್ಲಿ ಆಸ್ತಿ ದಿಡೀರ್ ಏರಿಕೆ
ವಿಶೇಷವೆಂದರೆ 8 ತಿಂಗಳ ಹಿಂದೆ ವಿಧಾನಸಭೆ ಚುನಾವಣೆಗೆ ಕನಕಪುರದಿಂದ ಡಮ್ಮಿ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಡಿಕೆ ಸುರೇಶ್ ಆಸ್ತಿ 353.7 ಕೋಟಿ ರೂ. ಎಂದು ಘೋಷಿಸಿದ್ದರು. ಆದರೆ ಇದೀಗ ಎಂಟೇ ತಿಂಗಳಲ್ಲಿ 239.34 ಕೋಟಿ ರೂ.ಗಳಷ್ಟು ಆಸ್ತಿ ಹೆಚ್ಚಾಗಿದೆ. ಕಳೆದ ಲೋಕಸಭೆ ಚುನಾವಣೆ ವೇಳೆ ಆಸ್ತಿ ಮೌಲ್ಯ 333.86 ಕೋಟಿ ರೂ. ಎಂದು ಘೋಷಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments