ಚನ್ನಪ್ಪಟ್ಟಣದಲ್ಲಿ ಸ್ಪರ್ಧಿಸಲು ಡಿಕೆ ಸುರೇಶ್ ಹಿಂದೇಟು ಹಾಕಿದ್ದೇಕೆ: ಸತ್ಯ ಹೇಳಿದ ಡಿಕೆಸು

Krishnaveni K
ಸೋಮವಾರ, 24 ಜೂನ್ 2024 (16:58 IST)
ಬೆಂಗಳೂರು: ಎಚ್ ಡಿ ಕುಮಾರಸ್ವಾಮಿಯಿಂದ ತೆರವಾಗಿರುವ ಚನ್ನಪಟ್ಟಣ ಉಪಚುನಾವಣೆಗೆ ಡಿಕೆ ಸುರೇಶ್ ಸ್ಪರ್ಧೆ ಮಾಡದೇ ಇರಲು ತೀರ್ಮಾನಿಸಿರುವುದು ಯಾಕೆ ಎಂದು ಅವರೇ ಬಿಚ್ಚಿಟ್ಟಿದ್ದಾರೆ.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿಕೆ ಸುರೇಶ್ ಸೋಲು ಅನುಭವಿಸಿದ್ದರು. ಇದಾದ ಬಳಿಕ ಅವರು ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳಿತ್ತು. ಆದರೆ ಅದು ಸುಳ್ಳಾಗಿದೆ.

ಡಿಕೆ ಸುರೇಶ್ ಬದಲಿಗೆ ತಾವೇ ಸ್ಪರ್ಧಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಹಾಗಿದ್ದರೂ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಅಧಿಕೃತ ಘೋಷಣೆಯಾಗಿಲ್ಲ. ಈ ನಡುವೆ ತಾವಂತೂ ಸ್ಪರ್ಧೆ ನಡೆಸುವುದಿಲ್ಲ ಎಂದು ಘೋಷಿಸಿರುವ ಡಿಕೆಸು ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

‘ಇತ್ತೀಚೆಗಷ್ಟೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಲೋಕಸಭೆಯಲ್ಲಿ ಸೋತು ಒಂದು ತಿಂಗಳಾಗಿಲ್ಲ.  ಜನ ನನ್ನನ್ನು ತಿರಸ್ಕರಿಸಿದ್ದಾರೆ. ಆಗಲೇ ಇನ್ನೊಂದು ಚುನಾವಣೆಗೆ ನಿಂತರೆ ಜನ ನೋಡಿ ನಗ್ತಾರೆ. ಬೇರೆಯವರು ಕೆಲಸ ಮಾಡಲಿ. ಅವರಿಗೆ ನಮ್ಮ ಬೆಂಬಲವಿರಲಿದೆ’ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ, ಡಿಕೆ ಶಿವಕುಮಾರ್ ಕುಟುಕಿದ ಆರ್‌ ಅಶೋಕ್‌

ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಐಷರಾಮಿ ಹೋಟೆಲ್‌ನಂತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Indigo Crisis: ಇಂದು ಬೆಂಗಳೂರಿನಲ್ಲಿ ರದ್ದಾದ ವಿಮಾನದ ಪಟ್ಟಿ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments