ದೇವೇಗೌಡರು ಆಂಬ್ಯುಲೆನ್ಸ್ ನಲ್ಲಿ ಬರಲಿ: ನಾಲಿಗೆ ಹರಿಬಿಟ್ಟ ಡಿಕೆ ಸುರೇಶ್ ವಿರುದ್ಧ ಭಾರೀ ಆಕ್ರೋಶ

Krishnaveni K
ಸೋಮವಾರ, 28 ಅಕ್ಟೋಬರ್ 2024 (10:29 IST)
ಚನ್ನಪಟ್ಟಣ: ಚುನಾವಣೆ ಎಂದರೆ ರಾಜಕಾರಣಿಗಳ ನಾಲಿಗೆ ಎಗ್ಗಿಲ್ಲದೇ ಹರಿದಾಡುತ್ತದೆ. ಇದೀಗ ಅದೇ ಆವೇಶದಲ್ಲಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ನೀಡಿದ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಚನ್ನಪಟ್ಟಣದಲ್ಲಿ ಈ ಬಾರಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ ಡಿಕೆ ಸುರೇಶ್ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದೀಗ ಡಿಕೆ ಸುರೇಶ್ ನೀಡಿರುವ ಹೇಳಿಕೆಯೊಂದು ಜೆಡಿಎಸ್ ಗೆ ಕಾಂಗ್ರೆಸ್ ವಿರುದ್ಧ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

ಚನ್ನಪಟ್ಟಣದ ಎನ್ ಡಿಎ ಅಭ್ಯರ್ಥಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲು ದೇವೇಗೌಡರು ಆಂಬ್ಯುಲೆನ್ಸ್ ನಲ್ಲಾದರೂ ಬರಲಿ, ಅವರ ಆರೋಗ್ಯ ಚೆನ್ನಾಗಿರಲಿ ಎಂದು ಡಿಕೆ ಸುರೇಶ್ ಹೇಳಿದ್ದರು. ಅವರ ಈ ಹೇಳಿಕೆ ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಅವರ ಈ ಹೇಳಿಕೆಗೆ ಇಂದು ಕುಮಾರಸ್ವಾಮಿ ತಿರುಗೇಟು ಕೊಡುವ ಸಾಧ್ಯತೆಯಿದೆ. ದೇವೇಗೌಡರು ಹಿರಿಯ ರಾಜಕಾರಣಿ. ರಾಜಕೀಯ ಏನೇ ಇರಲಿ, ಒಬ್ಬ ಹಿರಿಯ ರಾಜಕಾರಣಿಯ ಆರೋಗ್ಯವನ್ನು ಇಟ್ಟುಕೊಂಡು ಈ ರೀತಿ ನಾಲಿಗೆ ಹರಿಯಬಿಡುವುದು ಎಷ್ಟು ಸರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments