ಡಾ ಸಿಎನ್ ಮಂಜುನಾಥ್ ‘ಜಾಣ ಅಳಿಯ’ನೆಂದ ಡಿಕೆ ಸುರೇಶ್

Krishnaveni K
ಗುರುವಾರ, 14 ಮಾರ್ಚ್ 2024 (16:03 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದಿಂದ ಕಣಕ್ಕಿಳಿಯುತ್ತಿರುವ ಡಾ ಸಿಎನ್ ಮಂಜುನಾಥ್ ಗೆ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೇಸರು ಶಾಲು ಹಾಕಿ ಬಿಜೆಪಿ ಪಕ್ಷಕ್ಕೆ ಸ್ವಾಗತಿಸಲಾಯಿತು. ನಿನ್ನೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಾಗ ಡಾ ಸಿಎನ್ ಮಂಜುನಾಥ್ ಹೆಸರೂ ಘೋಷಣೆಯಾಗಿತ್ತು.

ಇದೀಗ ತಮ್ಮ ವಿರುದ್ಧ ಮಂಜುನಾಥ್ ಕಣಕ್ಕಿಳಿಯುವ ವಿಚಾರ ಅಧಿಕೃತವಾಗುತ್ತಿದ್ದಂತೇ ಡಿಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಡಾ ಸಿಎನ್ ಮಂಜುನಾಥ್ ಜಾಣ ಅಳಿಯ. ಜೆಡಿಎಸ್ ಪಕ್ಷ ಅವರ ಮಾವ (ಎಚ್ ಡಿ ದೇವೇಗೌಡ)ನದ್ದೇ ಆದರೂ ಆ ಪಕ್ಷಕ್ಕೆ ಭವಿಷ್ಯವಿಲ್ಲ ಎಂದು ಅವರಿಗೆ ಗೊತ್ತಿದೆ. ಅದಕ್ಕೇ ಬಿಜೆಪಿಗೆ ಸೇರಿದ್ದಾರೆ ಎಂದು ಡಿಕೆ ಸುರೇಶ್ ಟೀಕಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಜೆಡಿಎಸ್ ಜಾಣ ಅಳಿಯನಾದರೂ ತೊಂದರೆಯಿಲ್ಲ ಆದರೆ ನಿಮ್ಮಂತೆ ಇನ್ನೊಬ್ಬರನ್ನು ಸುಲಿಗೆ ಮಾಡಿ ಬದುಕುವಂತಾಗಬಾರದು ಎಂದಿದೆ. ಇನ್ನೊಂದೆಡೆ, ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದರೂ ತಾನು ಯಾರ ಬಗ್ಗೆಯೂ ಟೀಕೆ ಮಾಡಲು ಹೋಗುವುದಿಲ್ಲ ಎಂದು ಮಂಜುನಾಥ್ ಹೇಳಿದ್ದಾರೆ. ಮೋದಿ, ದೇವೇಗೌಡರಂತಹ ಹಿರಿಯರ ಒಳ್ಳೆಯ ಕೆಲಸ, ಕುಮಾರಸ್ವಾಮಿ ನಾಯಕತ್ವದ ಮಾರ್ಗದರ್ಶನದಲ್ಲಿ ನಡೆಯಲಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಮಿನಲ್ ವಂಚನೆ ಆರೋಪ: ಗೌತಮ್ ಅದಾನಿಗೆ ಯುಎಸ್‌ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್

ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿಯರಬ್ಬರ ದುರ್ಮರಣ

ಕಾನೂನು ವಿದ್ಯಾರ್ಥಿನಿ ಮೇಲಿನ ರೇಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಆರೋಪಿಗೆ ಅದ್ಧೂರಿ ವೆಲ್‌ಕಮ್

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಮುಂದಿನ ಸುದ್ದಿ
Show comments