Webdunia - Bharat's app for daily news and videos

Install App

ತಮ್ಮ ಡಿಕೆ ಸುರೇಶ್ ಗೆಲ್ಲಿಸುವುದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ

Krishnaveni K
ಮಂಗಳವಾರ, 26 ಮಾರ್ಚ್ 2024 (15:22 IST)
ಧರ್ಮಸ್ಥಳ: ಲೋಕಸಭೆ ಚುನಾವಣೆಗೆ ಮೊದಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆ ಅವರಿಗೆ ಪ್ರತಿಷ್ಠೆಯ ವಿಚಾರವಾಗಿದೆ.

ನಿನ್ನೆ ರಾತ್ರಿ ಧರ್ಮಸ್ಥಳಕ್ಕೆ ಬಂದಿಳಿದ ಅವರು ಇಂದು ಬೆಳಿಗ್ಗೆ ದೇವರ ದರ್ಶನ ಪಡೆದಿದ್ದಾರೆ. ಇಂದು ರುದ್ರಾಭಿಷೇಕ ಸೇವೆ ಸಲ್ಲಿಸಿ ಮಂಜುನಾಥ ಸ್ವಾಮಿಗೆ ಚುನಾವಣೆಯಲ್ಲಿ ಗೆಲ್ಲಿಸಿಕೊಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಕೊಲ್ಲೂರು ದೇವಾಲಯಕ್ಕೆ ತೆರಳಿದ್ದಾರೆ.

ಡಿಕೆ ಶಿವಕುಮಾರ್ ಜೊತೆ ಅವರ ಸಂಗಡಿಗರೂ ಇದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯಿಂದ ಡಾ ಸಿಎನ್ ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಡಿಕೆಶಿಗೆ ಸಹೋರನನ್ನು ಗೆಲ್ಲಿಸುವುದು ಪ್ರತಿಷ್ಠೆಯ ವಿಚಾರವಾಗಿದೆ.

ಕಳೆದ ಎರಡು ಬಾರಿ ಗೆಲುವು ಸಾಧಿಸಿದ್ದರೂ ಡಿಕೆ ಸುರೇಶ್ ಗೆ ಈ ಬಾರಿ ಗೆಲ್ಲುವುದು ಅಷ್ಟು ಸುಲಭವಲ್ಲ. ಕಳಂಕ ರಹಿತ, ತಮ್ಮ ವೈದ್ಯಕೀಯ ಸೇವೆಯಿಂದಲೇ ಜನರ ಪ್ರೀತಿ ಸಂಪಾದಿಸಿರುವ ಡಾ ಸಿಎನ್ ಮಂಜುನಾಥ್ ವಿರುದ್ಧ ಗೆಲ್ಲುವುದು ಡಿಕೆ ಬ್ರದರ್ಸ್ ಗೆ ಪ್ರತಿಷ್ಠೆಯ ವಿಚಾರ. ಅಲ್ಲದೆ, ರಾಜ್ಯದಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿರುವಾಗ ಡಿಕೆ ಸುರೇಶ್ ಸೋತರೆ ಅದು ಡಿಕೆ ಶಿವಕುಮಾರ್ ಗೆ ಮರ್ಯಾದೆ ಪ್ರಶ್ನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments