ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ

geetha
ಸೋಮವಾರ, 29 ಜನವರಿ 2024 (18:00 IST)
ಬೆಂಗಳೂರು-ಮಂಡ್ಯ ವಿಚಾರವಾಗಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಎಲೆಕ್ಷನ್ ಹತ್ತಿರ ಬರ್ತಿದೆ.ಬಿಜೆಪಿಯವರು ರಾಜಕೀಯ ಮಾಡ್ತಾ ಇದ್ದಾರೆ.ಮಂಡ್ಯದಲ್ಲಿ ಬಿಜೆಪಿಗೆ ಬೇಸ್ ಇಲ್ಲ.ಬೇಸ್ ಮಾಡಿಕೊಳ್ಳಬೇಕು ಅದಕ್ಕೆ ಬೇಸ್ ಕ್ರೀಯೇಟ್ ಮಾಡೋದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ.ಎಲ್ಲಾ ಕಡೆನೂ ಎಲ್ಲಾ ಸಂಘ ಸಂಸ್ಥೆಗಳು ಎಲ್ಲಾ ಪ್ಲಾಗ್ ಹಾಕೊಂಡು ತಿರುಗುತ್ತಾರೆ.

ಈ ದೇಶದ ಸಂವಿಧಾನ ಯಾಕೆ ಇರಬೇಕು?ಪಂಚಾಯತಿ ಅವರನ್ನ ಏನೋ ಒಂದು ಪರ್ಮಿಷನ್ ಕೇಳಿದ್ದಾರೆ.ಆ ಪ್ರಕಾರ ಮಾಡಬೇಕಿತ್ತು.ಸುಮ್ಮನೆ ಎತ್ತಿಕಟ್ಟಿ ಗಲಾಟೆ ಮಾಡಬೇಕು.ಅಶಾಂತಿ ಉಂಟು ಮಾಡಬೇಕು ಅಂತ ಪ್ರಯತ್ನ ಮಾಡ್ತಿದ್ದಾರೆ.ದೇಶ ಕಾನೂನು ಏನಿದೆ ಆ ಪ್ರಕಾರ ನಾವೆಲ್ಲ ನಡೆದುಕೊಳ್ಳಬೇಕು.ಬಿಜೆಪಿಯವರಿಗೆ ಬೇಸ್ ಇಲ್ಲ ಅದನ್ನ ಉಳಿಸಿಕೊಳ್ಳೋದಕ್ಕೆ ಪ್ರಯತ್ನ ಮಾಡ್ತಿದ್ದಾರೆ
 
ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ಎಂದು ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಶಿವಕುಮಾರ್‌ ಯಾರ್ರಿ ಹಿಂದು, ಫಸ್ಟ್ ನಾವೆಲ್ಲ ಭಾರತೀಯರು, ಭಾರತದ ಸಂವಿಧಾನ.ನಾನು ಫೋನ್ ಮಾಡಿ ಕೇಳಿದೆ .ಅಲ್ಲಿ ದಲಿತ ಸಂಘಟನೆ ಕೆಂಪೇಗೌಡ ಸಂಘಟನೆಯವರು ಕೇಳ್ತಿದ್ದಾರೆ.ಜೊತೆಗೆ‌ 25 ಜನರು ಕೇಳ್ತಿದ್ದಾರೆ ನಾವು ಬಾವುಟ ಹಾಕ್ತೀವಿ ಅಂತ ನಾವೆಲ್ಲ ಹಿಂದು ಅಲ್ವಾ? ಇವರು ಇಬ್ಬರೇನಾ ಹಿಂದು?ಮಂಡ್ಯದಲ್ಲಿರೋರೆಲ್ಲ ಹಿಂದು ಅಲ್ವಾ?ಸುಮ್ಮೆನೆ ಅಶಾಂತಿ ಮೂಡಿಸಲು ಪ್ರಯತ್ನ ಮಾಡ್ತಿದ್ದಾರೆ, ಮಾಡ್ಲಿ ಎಂದು ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments