Select Your Language

Notifications

webdunia
webdunia
webdunia
Sunday, 6 April 2025
webdunia

ಮಂಡ್ಯ ಕೈ ಮುಖಂಡರ ಸಭೆ ಕರೆದ ಡಿಕೆಶಿ

ನಿಖಿಲ್
ಬೆಂಗಳೂರು , ಶನಿವಾರ, 9 ಮಾರ್ಚ್ 2019 (16:44 IST)
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.


ಮಂಡ್ಯ ಕಾಂಗ್ರೆಸ್ ಮುಖಂಡರ ಸಭೆಯನ್ನು ಸಚಿವ ಡಿಕೆ ಶಿವಕುಮಾರ ಕರೆದಿದ್ದಾರೆ. ನಾಳೆ ಸಂಜೆ 5 ಕ್ಕೆ ನಡೆಯಲಿರುವ ಸಭೆಯಲ್ಲಿ ಜಿಲ್ಲೆಯ ಪ್ರಮುಖ ಕೈ ನಾಯಕರು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಕ್ರೆಸೆಂಟ್ ರಸ್ತೆಯ ಡಿಕೆ ಶಿವಕುಮಾರರ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ. ಸುಮಲತಾ ಸ್ಪರ್ಧೆ, ರೇವಣ್ಣ ಹೇಳಿಕೆಯಿಂದ ಗೊಂದಲ ಉಂಟಾಗಿರುವುದು ಸಭೆಯಲ್ಲಿ ಚರ್ಚೆಗೆ ಬರಲಿದೆ. ಮಂಡ್ಯ ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಲು ಸಭೆ ಕರೆಯಲಾಗಿದೆ.

ನಿಖಿಲ್ ಬೆಂಬಲಿಸುವ ಬಗ್ಗೆ ನಾಳೆ ಮುಖಂಡರಿಗೆ ಸೂಚನೆ ನೀಡಲಾಗುತ್ತದೆ. ಮೈತ್ರಿ ಧರ್ಮ ಪಾಲಿಸುವಂತೆ ಒತ್ತಡ ತರಲು ಮುಂದಾದ ಡಿಕೆ ಶಿವಕುಮಾರ್, ನಿಖಿಲ್ ಗೆಲುವಿಗೆ ರಣತಂತ್ರ ಆರಂಭಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಟೈಮ್ ನೋಡಿ ಅಸ್ತ್ರ ಬಿಡುವೆ ಎಂದ ಜಾಧವ್