ಡಿಕೆಶಿ ಹಸ್ತಕ್ಷೇಪ ಮಾಡಲು ಬಿಡಲ್ಲ ಎಂದ ಜಾರಕಿಹೊಳಿ!

Webdunia
ಬುಧವಾರ, 5 ಸೆಪ್ಟಂಬರ್ 2018 (16:06 IST)
ನಮ್ಮ ಸಮಸ್ಯೆ ಇದ್ದಾಗ ನಾವು ಕರೆದರೆ ಬರಲಿ. ಅವರಾಗಿ ಹಸ್ತಕ್ಷೇಪ ಮಾಡಲು ನಾವು ಬಿಡಲ್ಲ. ಡಿಕೆಶಿ ಇರಲಿ ಯಾರೇ ಇರಲಿ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲು ಬಿಡಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ಸಚಿವ ಡಿ.ಕೆ.ಶಿವಕುಮಾರ ಬೆಳಗಾವಿಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ನಾನು ಬೆಂಗಳೂರಿನಲ್ಲಿ ಹಸ್ತಕ್ಷೇಪ ಮಾಡೋದು ತಪ್ಪು. ಡಿಕೆಶಿ ಇರಲಿ ರಮೇಶ ಜಾರಕಿಹೊಳಿ ಇರಲಿ ನಮ್ಮ ಜಿಲ್ಲೆ ನಾವ್ ನೋಡ್ಕೋಬೇಕು. ನಮ್ಮ ಸಮಸ್ಯೆ ಇದ್ದಾಗ ನಾವು ಕರೆದರೆ ಬರಲಿ ಅವರಾಗಿ ಹಸ್ತಕ್ಷೇಪ ಮಾಡಲು ನಾವು ಬಿಡಲ್ಲ ಎಂದು ನೇರವಾಗಿ ಟಾಂಗ್ ನೀಡಿದ್ದಾರೆ.

ಡಿಕೆಶಿ ಇರಲಿ ಯಾರೇ ಇರಲಿ ಬೆಳಗಾವಿ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲು ಬಿಡಲ್ಲ ಎಂದಿರುವ ಅವರು,
ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ವಿಚಾರವನ್ನು ಈಗಾಗಲೇ ನಾವು ಚರ್ಚೆ ಮಾಡಿದ್ದೀವಿ. ದಯವಿಟ್ಟು ಅದನ್ನು ಮುಂದುವರೆಸಬೇಡಿ ಎಂದರು.

ರಾಜಕಾರಣದಲ್ಲಿ ವಾಗ್ವಾದ ಆಗೋದು ಕಾಮನ್. ಅದನ್ನೇ ವೈರತ್ವ ಅಂದುಕೊಂಡ್ರೆ ಮುರ್ಖತನ.
ಸತೀಶ್ ಜಾರಕಿಹೊಳಿ ಮೃದುವಾಗಿ ಹೇಳ್ತಾರೆ ನಾನು ಸಿಟ್ಟಿನಿಂದ ಹೇಳ್ತಿನಿ ಇದು ಅವರವರ ಸ್ವಭಾವ. ಅದನ್ನೆ ಮಾಧ್ಯಮದವರು ಊಹೆ ಮಾಡಿ ಬರೆದ್ರೆ ಅದು ತಪ್ಪು ಎಂದರು.

ಪಿ.ಎಲ್.ಡಿ ಬ್ಯಾಂಕ್ ಬಗ್ಗೆ ನನಗೆ ಗೊತ್ತಿಲ್ಲ. ಮೂರ್ನಾಲ್ಕು ಜನ ಶಾಸಕರಿದ್ದಾರೆ ಸಮಸ್ಯೆ ಪರಿಹಾರ ಮಾಡ್ಕೋತಾರೆ.
ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಚರ್ಚಿಸಲು ಆಕೆಗೆ ಅದು ಸಂಬಂಧವಿಲ್ಲ. ಹೆಬ್ಬಾಳಕರ್ ನನ್ನ ಜೊತೆ ಮಾತಾಡಿಲ್ಲ. ಸತೀಶ್ ಜಾರಕಿಹೊಳಿ ಮಾತಾಡಿದ್ದಾರೆ ಅವ್ರ ಜೊತೆ ಮಾತಾಡಿದ್ದೀನಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಮತವಿರಬೇಕು ಅಂದ್ರೆನೇ ಪ್ರಜಾಪ್ರಭುತ್ವ. ನಾವು ಹೇಳಿದ್ದೆ ತಲೆಯಾಡಿಸೋದಾದ್ರೆ ಹಿಟ್ಲರ್ ಶಾಹಿ ಆಗುತ್ತೆ. ಶೋ ಪೀಸ್ ಗಳ ಮಾತು ಕೇಳಿದ್ರೆ ಕಾಂಗ್ರೆಸ್ ಹಾಳಾಗುತ್ತದೆ. ಬೆಂಗಳೂರಿನಲ್ಲಿ ಹೋಗಿ ಶೋ ಮಾಡೋದಲ್ಲ ಎಂದು ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ವಿಚಾರವಾಗಿ ಮೇಲಿನಂತೆ ಪ್ರತಿಕ್ರಿಯೆಯನ್ನು   ಸಚಿವ ರಮೇಶ ಜಾರಕಿಹೊಳಿ ನೀಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments