Webdunia - Bharat's app for daily news and videos

Install App

ಡಿಕೆಶಿ, ಈಶ್ವರಪ್ಪ ಮಾತಿನ ಚಕಾಮಕಿ

Webdunia
ಬುಧವಾರ, 16 ಫೆಬ್ರವರಿ 2022 (14:46 IST)
ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ.
 
ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಈಶ್ವರಪ್ಪ ಮತ್ತು ಡಿಕೆ ಶಿವಕುಮಾರ್ ಇಬ್ಬರು ನಾಯಕರು ಮಾತಿನ ಜಗಳಕ್ಕೆ ಇಳಿದ ಪ್ರಸಂಗ ನಡೆಯಿತು. ಕೆಲದಿನಗಳ ಹಿಂದೆ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ನೀಡಿದ ಹೇಳಿಕೆ ಇಂದು ವಿಧಾನಸಭೆಯಲ್ಲಿ ಕೊಲಾಹಲ ಸೃಷ್ಟಿಸಿತು.

ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು. 

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಶ್ವರಪ್ಪ ಹೇಳಿಕೆಯ ಬಗ್ಗೆ ಅವರ ಅಭಿಪ್ರಾಯ ಕೇಳುತ್ತೇನೆ ಎಂದಾಗ, ದೇಶದ್ರೋಹ ಮಾಡಿವರೊಂದಿಗೆ ಏನು ಉತ್ತರ ಕೇಳುತ್ತೀರಿ ಎಂದು ಡಿಕೆಶಿ ಪ್ರಶ್ನಿಸಿದರು.

ಶಿವಕುಮಾರ್ ಮಾತಿಗೆ ತೀವ್ರ ಸಿಟ್ಟಿಗೆದ್ದ ಈಶ್ವರಪ್ಪ ರಾಷ್ಟ್ರ ದ್ರೋಹಿ ಅವನು, ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ ನೀನು ನನಗೆ ಹೇಳಬೇಡ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸದನದಲ್ಲಿ ಕೆಲಕಾಲ ಏಕವಚನದಲ್ಲಿ ಇಬ್ಬರೂ ಕೈ, ಕೈ ತೋರಿಸಿಕೊಂಡು ಕೂಗಾಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments