Publish Date: Tue, 02 Feb 2021 (12:27 IST)
Updated Date: Tue, 02 Feb 2021 (12:29 IST)
ಚಿತ್ರದುರ್ಗ : ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ ಸರ್ಕಾರ. ಕೊರೊನಾ ವಿಚಾರದಲ್ಲೂ ಹಣ ಲೂಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಕೆಟ್ಟ ಬಜೆಟ್ ಮಂಡಿಸಿದೆ. ರೈತರು, ಕಾರ್ಮಿಕರು ಸೇರಿ ಎಲ್ಲ ವರ್ಗಗಳಿಗೂ ತೊಂದರೆ. ದೇಶದಲ್ಲಿ ಪೆಟ್ರೋಲ್, ಡಿಸೇಲ್, ಬೆಲೆ ಗಗನಕ್ಕೇರಿದೆ. ಬಿಹೆಪಿ ಆಡಳಿತದ ವಿರುದ್ಧ ಜನರು ರೊಚ್ಚಿಗೆದ್ದಿದ್ದಾರೆ. ಬೆಲೆ ಏರಿಕೆಯ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧತೆ. ನಾಳೆ ನಮ್ಮ ಹೋರಾಟದ ರೂಪರೇಷೆ ಘೋಷಣೆ ಮಾಡ್ತೇವೆ ಎಂದು ಹೇಳಿದ್ದಾರೆ.