Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಡಿಕೆಶಿ

ಅನರ್ಹ ಶಾಸಕರ ಬಗ್ಗೆ ವ್ಯಂಗ್ಯವಾಡಿದ ಡಿಕೆಶಿ
ಹುಬ್ಬಳ್ಳಿ , ಶುಕ್ರವಾರ, 22 ನವೆಂಬರ್ 2019 (06:39 IST)
ಹುಬ್ಬಳ್ಳಿ : ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರಿಯುತ್ತಾರೆ ಎಂದು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.




ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ನನ್ನ ಸ್ನೇಹಿತರಾದ 17 ಮಂದಿ ಅನರ್ಹ ಶಾಸಕರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ. ಅವರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಬನ್ನು ಹರಿಯುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.


ಹಾಗೇ ಮಾತು ಮುಂದುವರಿಸಿದ ಅವರು, ನಾನು  ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಟೊಮೆಟೊವನ್ನೇ ಆಭರಣ ವಾಗಿ ಧರಿಸಿ ಹಸೆಮಣೆ ಏರಿದ ವಧು. ಕಾರಣವೇನು ಗೊತ್ತಾ?