Publish Date: Mon, 15 May 2023 (20:13 IST)
Updated Date: Mon, 15 May 2023 (18:34 IST)
ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಫೋನ್ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನ್ನು ಅನುಭವಿಸಿದ್ದರು. ನಿಖಿಲ್ ಕುಮಾರ್ ಸ್ವಾಮಿಗೆ ಫೋನ್ ಮುಖಾಂತರ ಡಿ.ಕೆ ಶಿವಕುಮಾರ್ ಸಾಂತ್ವನ ಹೇಳಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು.. ಈಗ ಮತ್ತೆ ವಿಧಾನಸಭಾ ಚುನಾವಣೆಯಲ್ಲೂ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸುವಂತಾಯಿತು. ಸತತ ಸೋಲಿನಿಂದ ಕಂಗೆಟ್ಟಿರುವ ನಿಖಿಲ್ಗೆ ಡಿ.ಕೆ ಶಿವಕುಮಾರ್ ನಿನಗೆ ರಾಜಕೀಯ ಕುಟುಂಬದ ಹಿನ್ನೆಲೆ ಇದೆ. ನನಗೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೇ ಇಷ್ಟು ಮಟ್ಟಕ್ಕೆ ಬೆಳೆದಿದ್ದೇನೆ. ಈ ಸೋಲಿನಿಂದ ಕಂಗೆಡಬೇಡ, ಕ್ಷೇತ್ರದಲ್ಲಿ ಓಡಾಟ ನಡೆಸಿ ಜನರ ಜೊತೆ ನಿಲ್ಲಬೇಕು ಎಂದು ಹೇಳಿದ್ರು.. ರಾಜಕೀಯದಲ್ಲಿ ಏಳು- ಬೀಳು ಸಹಜ.. ಸೋಲಿನಿಂದ ಹತಾಶನಾಗಬೇಡ, ಮುಂದಿನ ದಿನಗಳಲ್ಲಿ ನಿನಗೆ ರಾಜಕೀಯದಲ್ಲಿ ಭವಿಷ್ಯ ಇದೆ ಎಂದು ನಿಖಿಲ್ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾರೈಸಿದರು.